Connect with us

LATEST NEWS

ಧರ್ಮಸ್ಥಳ ಎಸ್ ಐಟಿ ತನಿಖೆಗೆ ಪ್ರಣವ್ ಮೊಹಂತಿ ನೇಮಕದಲ್ಲಿ ಕೆ.ಜೆ.ಜಾರ್ಜ್‌ ಕೈವಾಡ – ಮಾಜಿ ಡಿವೈಎಸ್ಪಿ ಅನುಪಮ ಶೆಣೈ

ಮಂಗಳೂರು ಜುಲೈ 28: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರು ಎಸ್ಐಟಿ ಮುಂದಾಳತ್ವ ವಹಿಸಿರುವ ಪ್ರಣವ್ ಮೊಹಾಂತಿ ಅವರು ಸೂಕ್ತ ವ್ಯಕ್ತಿ ಅಲ್ಲ. ಅವರ ನೇಮಕದ ಹಿಂದೆ ಸಚಿವ ಕೆ.ಜೆ ಜಾರ್ಜ್ ಕೈವಾಡ ಇದೆ ಎಂದು ಮಾಜಿ ಡಿ ವೈ ಎಸ್ ಸ್ಪಿ ಅನುಪಮ ಶೆಣೈ ಆರೋಪಿಸಿದ್ದಾರೆ.


ಮಂಗಳೂರಿನಲ್ಲಿ ಮಾತನಾಡಿದ ಅವರು ಪ್ರಣವ್ ಮೊಹಂತಿ ಅವರು ಅತ್ಯಾಚಾರ ಮತ್ತು ದರಹತ್ಯೆ ಕುರಿತಾದ ತನಿಖೆಗೆ ಸೂಕ್ತ ವ್ಯಕ್ತಿಯಲ್ಲ. ಮೊಹಂತಿ ನೇಮಕದಲ್ಲಿ ಕೆ.ಜೆ.ಜಾರ್ಜ್ ವಾಡವಿದೆ ಎಂದು ಪೊಲೀಸರು ಹೇಳುತ್ತಿದ್ದಾರೆ. ಮೊಹಂತಿ ನೇಮಕದಿಂದ ಪೊಲೀಸರ ನೈತಿಕ ಬಲ ಕುಗ್ಗಿದೆ ಎಂದು ಆರೋಪಿಸಿದರು.

ಧರ್ಮಸ್ಥಳ ಕೊಲೆಗಳ ತನಿಖೆಗೆ ನೇಮಕವಾದ SIT ತಂಡದ ಮುಂದಾಳತ್ವ ವಹಿಸಿರುವ ಐಪಿಎಸ್ ಅಧಿಕಾರಿ ಪ್ರನಬ್ ಮೊಹಾಂತಿಯವರ ಬದಲು ಇದರ ಮುಂದಾಳತ್ವವನ್ನು ಡಾ.ಕೆ. ರಾಮಚಂದ್ರ ರಾವ್ ಅಥವಾ ದಯಾನಂದರಂತಹ ಐಪಿಎಸ್ ಅಧಿಕಾರಿಗಳಿಗೆ ನೀಡಬೇಕೆಂದು ಆಗ್ರಹಿಸಿ ಮಾಜಿ ಡಿ ವೈ ಎಸ್ ಸ್ಪಿ ಅನುಪಮ ಶೆಣೈ ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಸರಕಾರಕ್ಕೆ ಆಗ್ರಹಿಸಿದರು .
‘ಪ್ರಣಬ್ 2 B.E., M.S in Computer Science, PhD ಹಾಗು ಇವರು certified Forensic Computer Examiner ಆಗಿರುತ್ತಾರೆ. ಇವೆಲ್ಲವನ್ನು ಗಮನಿಸಿದಾಗ, ಇವರ ನೈಪುಣ್ಯತೆಯು Cyber Crime ಆಗಿದೆಯೇ ವಿನ: ಅತ್ಯಾಚಾರ ಮತ್ತು ನರಹತ್ಯೆ ಕುರಿತಾದ ತನಿಖೆಗೆ ಇವರು ಸೂಕ್ತ ವ್ಯಕ್ತಿಯಲ್ಲ ಎಂದು ಪೊಲೀಸರೇ ಹೇಳುತ್ತಿದ್ದಾರೆ ಎಂದರು.

ಈ ಹಿಂದೆ ಮಂಗಳೂರಿನ ಚರ್ಚ್ ಗಲಭೆಯ ರಾಜಕೀಯದಿಂದಾಗಿ ಕನ್ನಡಿಗ ಡಿವೈಎಸ್ಪಿ ಎಂ.ಕೆ.ಗಣಪತಿಯವರು ಸಚಿವ ಕೆ.ಜೆ.ಜಾರ್ಜ್ ರಿಂದಾಗಿ ಬಹಳಷ್ಟು ಕಷ್ಟ ಅನುಭವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆ ಮಾಡಿಕೊಳ್ಳುವಾಗ ಡಿವೈಎಸ್ಪಿ ಗಣಪತಿಯವರು ಕೆ.ಜೆ.ಜಾರ್ಜ್ ಜತೆ ಐಪಿಎಸ್ ಅಧಿಕಾರಿ ಎ.ಎಂ.ಪ್ರಸಾದ್ ಮತ್ತು ಪ್ರಣಬ್ ಮೊಹಾಂತಿಯವರ ಹೆಸರನ್ನೂ ಸಹ ಉಲ್ಲೇಖಿಸಿದ್ದರು.
ಹೀಗಾಗಿ ಈ SIT ಮುಖಂಡರಾಗಿ ಪ್ರಣಬ್ ಮೊಹಾಂತಿಯವರ ನೇಮಕದಲ್ಲಿ ಕೆ.ಜೆ.ಜಾರ್ಜ್‌ ರವರ ಕೈವಾಡ ಇದೆ ಎಂದೇ ಪೊಲೀಸರು ಹೇಳುತ್ತಿದ್ದಾರೆ. ಸರಕಾರ ಈ ಕೂಡಲೆ ಪೊಲೀಸರ ಭಾವನೆಗೆ ಗೌರವ ಕೊಟ್ಟು ಪುಣಬ್ ಮೊಹಾಂತಿಯವರ ನೇಮಕವನ್ನು ರದ್ದುಗೊಳಿಸಿ ಬೇರೆ ಅಧಿಕಾರಿಯನ್ನು ನೇಮಿಸುವಂತೆ ಆಗ್ರಹಿಸಿದರು’.

Share Information
Continue Reading
Advertisement
Click to comment

Leave a Reply

Your email address will not be published. Required fields are marked *