UDUPI
ಮಾಧ್ಯಮ ಪ್ರತಿನಿಧಿಗಳೆದುರು ಕಣ್ಣೀರಿಟ್ಟ ಅನುಪಮಾ ಶೆಣೈ
![](https://i0.wp.com/themangaloremirror.in/wp-content/uploads/2024/04/For-Advertisement-Please-Contact.jpg?fit=728%2C90&ssl=1)
ಉಡುಪಿ, ಸೆಪ್ಟೆಂಬರ್ 5: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹ್ಯೂಬ್ಲೋಟ್ ವಾಚ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ನಡೆಸುವಂತೆ ಒತ್ತಾಯಿಸಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಪತ್ರ ಬರೆದಿದ್ದಾರೆ .
ಈ ಕುರಿತು ಉಡುಪಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ್ದಾರೆ. ನಾನು ಪ್ರಧಾನಿ ನರೇಂದ್ರ ಮೋದಿಯವರಿಗೆ ಬರೆದ ಪತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉದ್ಯಮಿ ಬಿ.ಆರ್ ಶೆಟ್ಟಿ ಅವರ ಹೆಸರನ್ನು ಉಲ್ಲೇಖಿ ಸೇರಿಸಿರುವುದಾಗಿ ಅವರು ತಿಳಿಸಿದರು.
![](https://i0.wp.com/themangaloremirror.in/wp-content/uploads/2024/06/IMG-20240626-WA0023.jpg?fit=1280%2C670&ssl=1)
ಪತ್ರಕ್ಕೆ ಪ್ರಧಾನ ಮಂತ್ರಿ ಕಚೇರಿಯಿಂದ ಉತ್ತರ ಬಂದಿದ್ದು ದೂರು ಪತ್ರವನ್ನು ಮುಂದಿನ ಹಂತಕ್ಕೆ ವರ್ಗಾವಣೆ ಮಾಡಿರುವುದಾಗಿ ಹೇಳಲಾಗಿದೆ.
ಆದರೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವ ಬಗ್ಗೆ ಯಾವುದೇ ಉಲ್ಲೇಖವಿಲ್ಲ ಎಂದು ಅವರು ವಿಷಾದ ವ್ಯಕ್ತಪಡಿಸಿದರು .
ನಾನು ನೀಡಿದ ದೂರಿನ ಕುರಿತು 2 ತಿಂಗಳು ಕಾದು ನೋಡುತ್ತೇನೆ. ಮುಂದಿನ ಬೆಳವಣಿಗೆಗಳನ್ನು ನೋಡಿ ನಂತರ ಕಾನೂನು ಸಮರಕ್ಕೆ ಮುಂದಾಗುತ್ತೇನೆ ಎಂದು ಅವರು ಈ ಸಂದರ್ಭದಲ್ಲಿ ಸ್ಪಷ್ಟಪಡಿಸಿದರು .
ಡಿವೈಎಸ್ಪಿ ಕಲ್ಲಪ್ಪ ಹಂಡಿಬಾಗ್ ಹಾಗೂ ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ನೆನೆದು ಕಣ್ಣೀರಿಟ್ಟರು .
ಈ ಪ್ರಕರಣಗಳ ತನಿಖೆ ನಡೆಸಿದ ಸಿಐಡಿ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಅನುಪಮಾ ಶೆಣೈ ಸಿಐಡಿ ಪೊಲೀಸರಿಗೆ ನಾಚಿಕೆಯಾಗಬೇಕು ಸತ್ತಿರುವುದು ನಿಮ್ಮ ಸಹೋದ್ಯೋಗಿಗಳೇ ಎನ್ನುವುದನ್ನು ಮರೆಯಬೇಡಿ ಎಂದು ಕಿಡಿಕಾರಿದರು .
You must be logged in to post a comment Login