Connect with us

    LATEST NEWS

    ಉಳ್ಳಾಲ ತಲಪಾಡಿಯಲ್ಲಿ ಅಕ್ರಮ ಸಾರಾಯಿ ಅಡ್ಡೆಗೆ ಅಬಕಾರಿ ಪೊಲೀಸ್ ದಾಳಿ, ಭಾರಿ ಪ್ರಮಾಣದಲ್ಲಿ ಸಾರಾಯಿ, ಸ್ಪಿರಿಟ್ ಜಪ್ತಿ..!

    ಉಳ್ಳಾಲ: ಗಡಿಭಾಗವಾದ ತಲಪಾಡಿಯಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಅಕ್ರಮ ಸಾರಾಯಿ ದಂಧೆ ಜಾಲವೊಂದನ್ನು ಪತ್ತೆಹಚ್ಚಿರುವ ಅಬಕಾರಿ ಪೊಲೀಸರು ಮೂವರನ್ನು ವಶಕ್ಕೆ ಪಡೆದಿದ್ದಾರೆ.

    ದಾಳಿ ಸಂದರ್ಭ ತಲಪಾಡಿ ಮಸೀದಿ ಬಳಿಯ ನಿವಾಸಿ ಸತೀಶ್ ತಲಪಾಡಿ, ಕುಂಜತ್ತೂರು ನಿವಾಸಿಗಳಾದ ನೌಷಾದ್ ಹಾಗೂ ಅನ್ಸೀಫ್ ಎಂಬವರನ್ನು ವಶಕ್ಕೆ ಪಡೆಯಲಾಗಿದೆ. ದಾಳಿ ವೇಳೆ ಸತೀಶ್ ತಲಪಾಡಿ ಮನೆಯಿಂದ ಲೀಟರ್ ಗಟ್ಟಲೆ ಸ್ಪಿರಿಟ್ ಹಾಗೂ ಅವುಗಳ ಸಾಗಾಟಕ್ಕೆ ಅನುವಾಗಿದ್ದ ಕಾರು ಹಾಗೂ ಪ್ಯಾಕಿಂಗ್ ಗೆಂದು ದಾಸ್ತಾನಿರಿಸಿದ್ದ ಪ್ಲಾಸ್ಟಿಕ್ ಕ್ಯಾನುಗಳನ್ನು ವಶಕ್ಕೆ ಪಡೆದಿರುವುದಾಗಿ ಅಬಕಾರಿ ಪೊಲೀಸರು ಮಾಹಿತಿ ನೀಡಿದ್ದಾರೆ.


    ಕಿನ್ಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಾಂತ್ಯ ಎಂಬಲ್ಲಿ ನಕಲಿ ಸಾರಾಯಿ ಘಟಕ ಕಾರ್ಯಾಚರಿಸುತ್ತಿರುವ ಬಗ್ಗೆ ಮಾಹಿತಿ ಪಡೆದ ಅಬಕಾರಿ ಪೊಲೀಸರು ಇಲ್ಲಿನ ನಿತ್ಯಾನಂದ ಭಂಡಾರಿ ಎಂಬಾತನ ಮನೆಗೆ ಮಂಗಳವಾರ ರಾತ್ರಿ 9 ಗಂಟೆ ಸುಮಾರಿಗೆ ದಾಳಿ ನಡೆಸಿದ್ದಾರೆ. ಈ ವೇಳೆ 60ಕ್ಕೂ ಅಧಿಕ ಕ್ಯಾನ್ ಗಳಲ್ಲಿ 2,240 ಲೀ ಮದ್ಯಸಾರ, 2022ರ ಅವಧಿ ಪೂರ್ಣಗೊಂಡ ಬಾಟಲಿಗಳಲ್ಲಿ ನಕಲಿ ಸಾರಾಯಿ, ಪಾಸ್ಟಿಕ್ ಪ್ಯಾಕೆಟ್, 222 ಲೀ. ನಕಲಿ ಬ್ರ್ಯಾಂಡಿ ಹಾಗೂ ನಕಲಿ ಸಾರಾಯಿ ಪ್ಯಾಕಿಂಗ್ ನಡೆಸುತ್ತಿದ್ದ ಯಂತ್ರಗಳು ಪತ್ತೆಯಾಗಿದ್ದು, ಅವುಗಳನ್ನು ವಶಪಡಿಸಿಕೊಳ್ಳಲಾಗಿದೆ. ದಾಳಿ ಸಂದರ್ಭ ಆರೋಪಿ ನಿತ್ಯಾನಂದ ಭಂಡಾರಿ ಪರಾರಿಯಾಗಿದ್ದಾನೆ ಎಂದು ಅಬಕಾರಿ ಪೊಲೀಸರು ತಿಳಿಸಿದ್ದಾರೆ.ದಾಳಿ ನಡೆದ ಮನೆಯಿಂದ ಕೇರಳದ ರಾ.ಹೆ.ಯನ್ನು ಒಳಮಾರ್ಗವಾಗಿ ಸಂಪರ್ಕಿಸಲು ಕೇವಲ 1.5 ಕಿ.ಮೀ. ದೂರವಷ್ಟೇ ಕ್ರಮಿಸಬೇಕಿದೆ. ಇದೇ ದಾರಿಯಾಗಿ ಹಲವು ವರ್ಷಗಳಿಂದ ಅಂತಾರಾಜ್ಯವಾಗಿ ಈ ದಂಧೆ ನಡೆಯುತ್ತಿರುವ ಶಂಕೆಯನ್ನು ಕಾರ್ಯಾಚರಣೆ ನಡೆಸಿದ ಅಬಕಾರಿ ತಂಡ ವ್ಯಕ್ತಪಡಿಸಿದೆ.

    ಡಿಭಾಗವಾದ ತಲಪಾಡಿಯಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಅಕ್ರಮ ಸಾರಾಯಿ ದಂಧೆ ಜಾಲವೊಂದನ್ನು ಪತ್ತೆಹಚ್ಚಿರುವ ಅಬಕಾರಿ ಪೊಲೀಸರು ಮೂವರನ್ನು ವಶಕ್ಕೆ ಪಡೆದಿದ್ದಾರೆ.

     

     

    Share Information
    Advertisement
    Click to comment

    You must be logged in to post a comment Login

    Leave a Reply