Connect with us

LATEST NEWS

ಉಡುಪಿ ಶ್ರೀಕೃಷ್ಣ ಮಠಕ್ಕೆ ವಿದೇಶಾಂಗ ಸಚಿವ ಜೈಶಂಕರ್ ಭೇಟಿ….!!

ಉಡುಪಿ ಮಾರ್ಚ್ 19: ಕೇಂದ್ರ ವಿದೇಶಾಂಗ ಸಚಿವ ಎಸ್ ಜೈಶಂಕರ್ ಉಡುಪಿಯ ಕೃಷ್ಣ ಮಠಕ್ಕೆ ಭೇಟಿನೀಡಿ ದೇವರ ದರ್ಶನ ಪಡೆದರು.


ಮಣಿಪಾಲದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಆಗಮಿಸಿದ ಅವರು ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು ಬಳಿಕ ಪರ್ಯಾಯ ಕೃಷ್ಣಾಪುರ ಮಠದ ವಿದ್ಯಾಸಾಗರ ತೀರ್ಥ ಸ್ವಾಮೀಜಿ ಅವರನ್ನು ಭೇಟಿಮಾಡಿ ಅನುಗ್ರಹ ಪ್ರಸಾದ ಸ್ವೀಕರಿಸಿದರು.

ನಂತರ ಅಮೃತ್ ಗಾರ್ಡನ್‌ನಲ್ಲಿ ಮಣಿಪಾಲದ ಮಾಹೆ ವಿಶ್ವವಿದ್ಯಾಲಯದ ಟ್ಯಾಪ್ಮಿ ವಿಭಾಗ ಆಯೋಜಿಸಿದ್ದ ನಾಯಕತ್ವ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಮಧ್ಯಾಹ್ನ 3 ಗಂಟೆಗೆ ಮಣಿಪಾಲದ ಕಂಟ್ರಿಇನ್ ಹೋಟೆಲ್‌ನಲ್ಲಿ ಬಿಜೆಪಿ ಹಮ್ಮಿಕೊಂಡಿರುವ ಪ್ರಬುದ್ಧರ ಸಮಾವೇಶದಲ್ಲಿ ಎಸ್‌.ಜೈಶಂಕರ್ ಭಾಗವಹಿಸಲಿದ್ದಾರೆ‌.

Advertisement
Click to comment

You must be logged in to post a comment Login

Leave a Reply