DAKSHINA KANNADA
ಯತೀಶ್ ಪೆರುವಾಯಿ ಎಂಬ ಹೆಸರಿನ ಪೇಸ್ ಬುಕ್ ಖಾತೆಯಲ್ಲಿ ಕೋಮು ಸೌಹಾರ್ದತೆ ಧಕ್ಕೆ ಪೋಸ್ಟ್ – ಪ್ರಕರಣ ದಾಖಲು

ವಿಟ್ಲ ಜೂನ್ 01: ಸಾಮಾಜಿಕ ಜಾಲತಾಣದಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ತರುವಂತ ಪೋಸ್ಟ್ ಹಾಕಿದ ಆರೋಪದ ಮೇಲೆ ಬಂಟ್ವಾಳ ಪೆರುವಾಯಿ ಗ್ರಾಮದ ನಿವಾಸಿ ಯತೀಶ ಎಂಬಾತನ ಮೇಲೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ʻʻಯತೀಶ್ ಪೆರುವಾಯಿʼʼ ಎಂಬ ಹೆಸರಿನ ಪೇಸ್ ಬುಕ್ ಖಾತೆಯಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆಯನ್ನುಂಟು ಮಾಡುವ 03 ಪೋಸ್ಟ್ ಗಳನ್ನು ಹಾಕಲಾಗಿದೆ. ಸದ್ರಿ ಪೋಸ್ಟ್ ಗಳಿಂದಾಗಿ ವಿಭಿನ್ನ ಸಮುದಾಯಗಳ ನಡುವೆ ವೈಮನಸ್ಸು ಉಂಟಾಗಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆಗಳು ಕಂಡುಬಂದಿರುವ ಹಿನ್ನೆಲೆಯಲ್ಲಿ ಆರೋಪಿತನ ವಿರುದ್ದ ವಿಟ್ಲ ಪೊಲೀಸ್ ಠಾಣೆಯಲ್ಲಿ ದಿನಾಂಕ:31-05-2025 ರಂದು ಅ.ಕ್ರ: 72/2025 ಕಲಂ: 353(2) BNS 2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದ್ದು, ಮುಂದಿನ ಕಾನೂನುಕ್ರಮ ಕೈಗೊಳ್ಳಲಾಗುವುದು.
