Connect with us

LATEST NEWS

ಕೊಂಕಣ್ ರೈಲ್ವೆಯಲ್ಲಿ ಕೆಲಸ ಕೊಡಿಸುವುದಾಗಿ ವಂಚನೆ – ನಕಲಿ ಟಿಸಿ ಬಂಧನ

ಉಡುಪಿ ನವೆಂಬರ್ 11: ಕೊಂಕಣ ರೈಲ್ವೆ ಇಲಾಖೆಯಲ್ಲಿ ಟಿ.ಸಿ ಅಗಿ ಕೆಲಸ ಮಾಡಿಕೊಂಡಿರುವುದಾಗಿ ಹೇಳಿ ಉಡುಪಿ ಜಿಲ್ಲೆ ಮತ್ತು ಹೊರ ಜಿಲ್ಲೆಗಳಲ್ಲಿ ಸಾರ್ವಜನಿಕರನ್ನು ನಂಬಿಸಿ ಅವರ ಬಳಿ ಹಣ ಮತ್ತು ದಾಖಲಾತಿ ಪಡೆದುಕೊಂಡು ಸಾರ್ವಜನಿಕರಿಗೆ ಮೋಸ ಮಾಡಿರುವ ಆರೋಪದಲ್ಲಿ ಗಣೇಶ್ ನಾಯ್ಕ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.


ಮಣಿಪಾಲ ಕೆಎಂಸಿ ಅಸ್ಪತ್ರೆಯಲ್ಲಿ ಸೆಕ್ಯೂರಿಟಿ ಕೆಲಸ ಮಾಡಿಕೊಂಡಿದ್ದ ಮಥಾಯಿಸ್ ಎಂಬುವರ ಬಳಿ ತಾನು ಕೊಂಕಣ ರೈಲ್ವೆ ಇಲಾಖೆಯಲ್ಲಿ ಟಿಸಿ ಆಗಿರುವುದಾಗಿ ಹೇಳಿ ಉದ್ಯೋಗ ಕೊಡುವುದಾಗಿ ನಂಬಿಸಿ 20,000 ರೂ. ಹಾಗೂ ದಾಖಲೆ ಪತ್ರಗಳನ್ನು ತೆಗೆದುಕೊಂಡಿದ್ದ. ಅದೇ ರೀತಿ ಪರ್ಕಳದ ವನಿತಾ ಎಂಬುವರಿಂದ ಹಣ ಪಡೆದು ನಕಲಿ ನೇಮಕಾತಿ ಪತ್ರ ನೀಡಿ, ಉದ್ಯೋಗ ಕೊಡಿಸದೆ ಮೋಸ ಮಾಡಿದ್ದ. ಈ ಬಗ್ಗೆ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *