Connect with us

KARNATAKA

ಕೌಟುಂಬಿಕ ಕಲಹಕ್ಕೆ ಬೇಸತ್ತು, ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆಗೆ ಶರಣಾದ ಕಮಲಾ ..!!

ಶಿವಮೊಗ್ಗ :  ಕೌಟುಂಬಿಕ ಕಲಹದಿಂದ ಬೇಸತ್ತು ಮಹಿಳೆಯೊಬ್ಬರು  ಚಲಿಸುತ್ತಿದ್ದ  ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ಶಿವಮೊ್ಗ್ಗ (Shimogga) ನಗರದಲ್ಲಿ (Shivamogga) ನಡೆದಿದೆ.

ಕಮಲಾ (35) ಆತ್ಮಹತ್ಯೆಗೆ ಶರಣಾದ ಮಹಿಳೆಯಾಗಿದ್ದಾಳೆ.  ಮೃತ ಮಹಿಳೆ ಕಮಲಾ  ಸೋಮವಾರ ರಾತ್ರಿ ಪತಿಯೊಂದಿಗೆ ಜಗಳವಾಡಿ ಮನೆಯಿಂದ ಹೊರ ಹೋಗಿದ್ದರು .ಬಳಿಕ ತಾಳಗುಪ್ಪ – ಬೆಂಗಳೂರು ಮಧ್ಯೆ ಸಂಚರಿಸುವ ರೈಲಿಗೆ ತಲೆಕೊಟ್ಟು ಕಮಲಾ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಮೃತ ಕಮಲಾ ಮೆಗ್ಗಾನ್ ಆಸ್ಪತ್ರೆಯಲ್ಲಿ ಹೊರಗುತ್ತಿಗೆ ನೌಕರಳಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಸ್ಥಳಕ್ಕೆ ವಿನೋಬನಗರ ಹಾಗೂ ರೈಲ್ವೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಾಗಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *