Connect with us

    KARNATAKA

    9 ತಿಂಗಳ ಮಗುವನ್ನು ಸಾಯಿಸಿ ನೇಣಿಗೆ ಶರಣಾದ ನಾಲ್ವರು..!!

    ಬೆಂಗಳೂರು ಸೆಪ್ಟೆಂಬರ್ 17: 9 ತಿಂಗಳ ಮಗು ಸೇರಿದಂತೆ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾದ ಘಟನೆ ಬ್ಯಾಡರಹಳ್ಳಿ ಬಳಿಯ ತಿಗಳರಪಾಳ್ಯದಲ್ಲಿ ನಡೆದಿದೆ. ಮೃತರನ್ನು ಭಾರತಿ (51), ಅವರ ಮಕ್ಕಳಾದ ಸಿಂಚನಾ (34), ಸಿಂಧೂರಾಣಿ (33) ಹಾಗೂ ಮಧುಸಾಗರ್ (25) ಆತ್ಮಹತ್ಯೆ ಮಾಡಿಕೊಂಡವರು. ಸಿಂಧೂರಾಣಿ ಅವರ ಕೂಸು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ.


    ‘ಐವರ ಮೃತದೇಹ ಸಿಕ್ಕ ಮನೆಯಲ್ಲೇ ಸಿಂಚನಾ ಅವರ ಮಗಳಾದ ಎರಡೂವರೆ ವರ್ಷದ ಬಾಲಕಿ ಪತ್ತೆಯಾಗಿದ್ದಾಳೆ. ಪ್ರಜ್ಞೆ ತಪ್ಪಿ ಉಸಿರಾಡುತ್ತಿದ್ದ ಆಕೆಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಗ್ಯ ಸ್ಥಿತಿ ಸುಧಾರಿಸುತ್ತಿದೆ.


    ಮೂರು ನಾಲ್ಕು ದಿನಗಳ ಹಿಂದೆ ಬ್ಯಾಡರ್ ಹಳ್ಳಿಯ ಚೇತನ್ ಸರ್ಕಲ್ 4 ಕ್ರಾಸ್ ನಲ್ಲಿರೋ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರೋ ಶಂಕೆ ವ್ಯಕ್ತವಾಗಿದ್ದು, ಕೊಳೆತ ಸ್ಥಿತಿಯಲ್ಲಿ ಶವಗಳು ಪತ್ತೆಯಾಗಿವೆ. ಆದರೆ ಆತ್ಮಹತ್ಯೆಗೆ ಸ್ಪಷ್ಟವಾದ ಕಾರಣ ತಿಳಿದು ಬಂದಿಲ್ಲ.

    ಕೌಟುಂಬಿಕ ಕಲಹದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮನೆಯಲ್ಲಿ ಪ್ರತಿದಿನ ಗಲಾಟೆ ಆಗುತ್ತಿತ್ತು.ಹೀಗೆ ಪತ್ನಿಯೊಂದಿಗೆ ಜಗಳ ಮಾಡಿಕೊಂಡು ಶಂಕರ್ ನಾಲ್ಕು ದಿನಗಳ ಹಿಂದೆ ಮನೆ ಬಿಟ್ಟಿದ್ದರು. ಇದರಿಂದ ಮನನೊಂದ ಶಂಕರ್ ಪತ್ನಿ, ಪುತ್ರ, ಇಬ್ಬರು ಹೆಣ್ಣುಮಕ್ಕಳು ಪತಿ ಮನೆಯಲ್ಲಿ ಇಲ್ಲದ ಸಂದರ್ಭದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಮುನ್ನ ಸಿಂಧೂರಾಣಿಯ 9 ತಿಂಗಳ ಹಸುಗೂಸನ್ನು ಕೊಂದಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply