Connect with us

    FILM

    ಖ್ಯಾತ  ಸಿನಿಮಾ ನಿರ್ದೇಶಕ ನಿರ್ದೇಶಕ ವಿನೋದ್ ದೋಂಡಾಲೆ ಮೃತ್ಯು, ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ..! 

    ಬೆಂಗಳೂರು : ಸಿನಿಮಾ ಹಾಗೂ ಕಿರುತೆರೆ ಧಾರಾವಾಹಿ ನಿರ್ದೇಶಕ ವಿನೋದ್ ದೊಂಡಾಲೆ  ಅವರ ಶವ ಅವರ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

    ಮೂವರು ಮಕ್ಕಳು ಹಾಗೂ ಪತ್ನಿಯನ್ನು ವಿನೋದ್ ಅಗಲಿದ್ದು ಹಣಕಾಸಿನ ವಿಚಾರಕ್ಕೆ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ. ನಾಗರಬಾವಿಯ ಮನೆಯಲ್ಲಿ ಅವರ ಶವ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಶವವನ್ನು ಮರಣೋತ್ತರ ಪರೀಕ್ಷೆಗೆ ಕಳಿಸಿದ್ದಾರೆ.  ಮೂಲಗಳ ಪ್ರಕಾರ, ವಿನೋದ್ ಅವರು ಸಿನಿಮಾ ಹಾಗೂ ವೈಯಕ್ತಿಕ ಜೀವನ ನಿರ್ವಹಣೆಗೆ ಹಲವರಿಂದ ಸಾಲಗಳನ್ನು ಮಾಡಿಕೊಂಡಿದ್ದರಂತೆ. ಈಗ ಸಾಲ ತೀರಿಸಲು ಆಗದ ಕಾರಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.
    ನೀನಾಸಂ ಸತೀಶ್ ನಟನೆಯ ‘ಅಶೋಕ ಬ್ಲೇಡ್’ ಸಿನಿಮಾವನ್ನು ವಿನೋದ್ ನಿರ್ದೇಶನ ಮಾಡುತ್ತಿದ್ದರು. ‘ಅಶೋಕ್ ಬ್ಲೇಡ್’ ಸಿನಿಮಾದ ಕೊನೆಯ ಹಂತದ ಚಿತ್ರೀಕರಣ ಬಾಕಿಯಿದೆ. ನಿನ್ನೆಯಷ್ಟೇ ನಟ ನೀನಾಸಂ ಸತೀಶ್ ಹಾಗೂ ‘ಅಶೋಕ ಬ್ಲೇಡ್’ ಸಿನಿಮಾದ ನಿರ್ಮಾಪಕರ ಜೊತೆ ಶೂಟಿಂಗ್ ಬಗ್ಗೆ ವಿನೋದ್ ಚರ್ಚಿಸಿದ್ದರಂತೆ.  ಆದರೆ ಆ ಬಳಿಕ ಆತ್ಮಹತ್ಯೆಗೆ ಶರಣಾಗಿದ್ದಾರೆ.  ಸಿನಿಮಾ ಅಲ್ಲದೆ ಕಿರುತೆರೆಯಲ್ಲಿಯೂ ವಿನೋದ್ ಕೆಲಸ ಮಾಡಿದ್ದು ‘ಕರಿಮಣಿ’ ಧಾರಾವಾಹಿ ನಿರ್ದೇಶನ ಮಾಡುತ್ತಿದ್ದರು.

    Share Information
    Advertisement
    Click to comment

    You must be logged in to post a comment Login

    Leave a Reply