Connect with us

    LATEST NEWS

    ಮಂಗಳೂರು – ಮಗನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಅಪ್ಪ

    ಮಂಗಳೂರು ಜೂನ್ 22: ತಂದೆಯೇ ಮಗನ ಮೇಲೆ ಪೆಟ್ರೋಲ್ ಸುರಿದು ಕೊಲೆಗೆ ಯತ್ನಿಸಿದ ಘಟನೆ ಜೆಪ್ಪಿನಮೊಗರು ತಾರ್ದೊಲ್ಯ ಎಂಬಲ್ಲಿ ನಿನ್ನೆ ತಡರಾತ್ರಿ ನಡೆದಿದ್ದು, ಗಂಭೀರವಾಗಿ ಗಾಯಗೊಂಡಿರುವ ಮಗನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.


    ಪೆಟ್ರೋಲ್ ಸುರಿದು ಬೆಂಕಿಯಿಂದ ಗಾಯಗೊಂಡ ಯುವಕನನ್ನು ಶರ್ಮಿತ್(25) ಎಂದು ಗುರುತಿಸಲಾಗಿದ್ದು, ಆರೋಪಿ ತಂದೆ ವಿಶ್ವನಾಥ ಶೆಟ್ಟಿ ಯಾನೆ ತಿಪ್ಪಿ ಎಂದು ಗುರುತಿಸಲಾಗಿದ್ದು, ಆರೋಪಿಯನ್ನು ಮಂಗಳೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.


    ನಿನ್ನೆ ಸಂಜೆ ಮನೆಯಲ್ಲಿ ತಂದೆ ಮತ್ತು ಮಗನ ನಡುವೆ ಜಗಳ ನಡೆದಿತ್ತು. ಇದೇ ದ್ವೇಷದಿಂದ ಮನೆಯ ಕೋಣೆಯೊಳಗೆ ಮಲಗಿದ್ದು ಮಗನ ಮೇಲೆ ಆರೋಪಿ ತಂದೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಬೆಂಕಿಗೆ ಗಂಭೀರವಾಗಿ ಗಾಯಗೊಂಡಿದ್ದ ಶರ್ಮಿತ್ ನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply