Connect with us

LATEST NEWS

ಪಾಝಿಲ್ ಹತ್ಯೆ ಪ್ರಕರಣ – ಆರು ಮಂದಿ ಆರೆಸ್ಟ್….!!

Share Information

ಮಂಗಳೂರು ಅಗಸ್ಟ್ 02: ಭಾರೀ ಸಂಚಲನ ಮೂಡಿಸಿದ್ದ ಮಂಗಳಪೇಟೆ ನಿವಾಸಿ ಮುಹಮ್ಮದ್ ಫಾಝಿಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಸುಹಾಸ್ ಶೆಟ್ಟಿ, ಮೊಹನ್, ಗಿರಿಧರ್, ಅಭಿಷೇಕ್, ಶ್ರೀನುವಾಸ್, ದೀಕ್ಷಿತ್ ಎಂದು ಗುರುತಿಸಲಾಗಿದೆ.


ಈ ಬಗ್ಗೆ ಮಾಹಿತಿ ನೀಡಿದ ಪೊಲೀಸ್ ಆಯುಕ್ತ ಶಶಿಕುಮಾರ್, ಪ್ರಕರಣದ ಸಂಬಂಧ ಆರೋಪಿಗಳನ್ನು ಬಂಧಿಸಲಾಗಿದೆ. ವಿಚಾರಣೆಯ ವೇಳೆ ಆರೋಪಿಗಳು ಕೃತ್ಯ ಎಸಗಿರುವುದನ್ನು ಒಪ್ಪಿಕೊಂಡಿದ್ದಾರೆ ಎಂದು ಅವರು ಮಾಹಿತಿ‌ ನಿಡಿದರು.


ಘಟನೆಗೆ ಸಂಬಂಧಿಸಿದಂತೆ ದುಷ್ಕರ್ಮಿಗಳು ಹತ್ಯೆಗೆ ಬಳಸಿದ್ದ ಕಾರಿನ ನೋಂದಣಿ‌ ಸಂಖ್ಯೆ ಪತ್ತೆ ಹಚ್ಚಿ ಅದರ‌‌ ಮಾಲಕ ಅಜಿತ್ ಕ್ರಾಸ್ತ ಎಂಬಾತನನ್ನು ವಶಕ್ಕೆ ಪಡೆಯಲಾಗಿತ್ತು. ಬಳಿಕ ಆತನನ್ನು ವಿಚಾರಣೆಗೆ ಒಳಪಡಿಸಿದಾಗ ಆತ ಹೆಚ್ಚುವರಿ ಹಣ ಪಡೆದು ಕಾರನ್ನು ಬಾಡಿಗೆ ರೂಪದಲ್ಲಿ ನೀಡಿರುವುದಾಗಿ ಮಾಹಿತಿ ನೀಡಿದ್ದ.


Share Information
Advertisement
Click to comment

You must be logged in to post a comment Login

Leave a Reply