Connect with us

LATEST NEWS

ಮಂಗಳೂರು ಜೈಲಿನಲ್ಲಿ ಖೈದಿಗಳ ನಡುವೆ ಹೊಡೆದಾಟ

ಮಂಗಳೂರು ಜೂನ್ 26: ಮಂಗಳೂರು ಜೈಲಿನಲ್ಲಿ ಮತ್ತೆ ಖೈದಿಗಳ ನಡುವೆ ಹೊಡೆದಾಟ ನಡೆದಿದೆ ಎಂದು ವರದಿಯಾಗಿದೆ. ಉಳ್ಳಾಲದ‌ ನಟೋರಿಯಸ್ ರೌಡಿ ಮುಖ್ತಾರ್ ಹಾಗೂ ಇತರೆ ಖೈದಿಗಳ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದಿದೆ ಎಂದು ಹೇಳಲಾಗಿದೆ. ಮುಖ್ತಾರ್ ಮತ್ತೊಬ್ಬ ಕೈದಿ ಕೇಶವ ಎಂಬಾತನ ಮೇಲೆ ಹಲ್ಲೆ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಕೇಶವನನ್ನು ವೆನ್ಲಾಕ್ ಆಸ್ಪತ್ರೆಗೆ ಪೊಲೀಸರು ದಾಖಲಿಸಿದ್ದಾರೆ.


2023ರಲ್ಲಿ ನಡೆದ ಪುತ್ತೂರಿನ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದ ಆರೋಪಿ ಕೇಶವ ಜೈಲಿವಾಸ ಅನುಭವಿಸುತ್ತಿದ್ದಾನೆ. ಉಳ್ಳಾಲ ಧರ್ಮನಗರ ನಿವಾಸಿಯಾಗಿರುವ ಆರೋಪಿ ಮಹಮದ್ ಮುಖ್ತಾರ್ 15 ಪ್ರಕರಣಗಳಲ್ಲಿ ಆರೋಪಿಯಾಗಿದ್ದು, 2022ರ ಜುಲೈನಲ್ಲಿ ಈತನ ಕಾಲಿಗೆ ಗುಂಡಿಕ್ಕಿ ಬಂಧನ ಮಾಡಲಾಗಿತ್ತು.


ಸದ್ಯ ಜೈಲು ಗಲಾಟೆ ಬಗ್ಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜೈಲಿಗೆ ಬರ್ಕೆ ಠಾಣೆ ಪೊಲೀಸರು ಹಾಗೂ ಎಸಿಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share Information
Continue Reading
Advertisement
1 Comment

1 Comment

    Leave a Reply

    Your email address will not be published. Required fields are marked *