Connect with us

    KARNATAKA

    ನಟ ಜೈಜಗದೀಶ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

    ಮಂಡ್ಯ, ಜೂನ್ 09: ನಟ ಜೈಜಗದೀಶ್‌ ಅವರ ಮೇಲೆ ಹಲ್ಲೆ ಆರೋಪ ಕೇಳಿಬಂದಿದೆ. ಈ ಸಂಬಂಧ ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಬೆಳ್ಳೂರು ಪೊಲೀಸ್‌ ಠಾಣೆಯಲ್ಲಿ ಇವರ ವಿರುದ್ಧ ಜಯರಾಮೇಗೌಡ ಎಂಬುವವರು ದೂರು ದಾಖಲು ಮಾಡಿರುವುದಾಗಿ ತಿಳಿದುಬಂದಿದೆ.

    ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಜಯರಾಮೇಗೌಡ ಅವರಿಗೆ ಅವಾಚ್ಯ ಶಬ್ದಗಳಿಂದ ಜೈಗದೀಶ್‌ ಅವರು ನಿಂದಿಸಿ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.

    ಇದೇ ಜೂನ್ 5ರಂದು ಈ ಘಟನೆ ನಡೆದಿದೆ. ಜಯರಾಮೇಗೌಡ ಅವರು ಬಸ್ಸಿನಿಂದ ಕೆಳಕ್ಕೆ ಇಳಿಯುತ್ತಿರುವ ಸಂದರ್ಭದಲ್ಲಿ ಹಿಂದಿನಿಂದ ಜೈಗದೀಶ್‌ ಅವರು ಕಾರಿನಿಂದ ಬರುತ್ತಿದ್ದರು. ಈ ಸಮಯದಲ್ಲಿ ಬಸ್ಸಿನಿಂದ ಯಾಕೆ ಬಾಟಲಿ ಎಸೆಯುತ್ತಿಯಾ ಎಂದು ಪ್ರಶ್ನಿಸಿ ಕೆಟ್ಟ ಶಬ್ದಗಳಿಂದ ಬೈದದ್ದೂ ಅಲ್ಲದೇ, ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಇನ್ನಷ್ಟೇ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

    Share Information
    Advertisement
    Click to comment

    You must be logged in to post a comment Login

    Leave a Reply