FILM
ಕಿರಾತಕ ಚಿತ್ರ ನಿರ್ದೇಶಕ ಪ್ರದೀಪ್ ರಾಜ್ ಕೊರೊನಾ ಸೊಂಕಿಗೆ ಬಲಿ
ಬೆಂಗಳೂರು ಜನವರಿ 20: ರಾಕಿಂಗ್ ಸ್ಟಾರ್ ಯಶ್ ಗೆ ಬ್ರೇಕ್ ಕೊಟ್ಟ ಕಿರಾತಕ ಚಿತ್ರವನ್ನು ನಿರ್ದೇಶಿಸಿದ್ದ ಪ್ರದೀಪ್ ರಾಜ್ ಕೊರೊನಾಗೆ ಬಲಿಯಾಗಿದ್ದಾರೆ. ಡಯಾಬಿಟಿಸ್ ನಿಂದ ಹಲವು ವರ್ಷಗಳಿಂದ ಬಳಲುತ್ತಿದ್ದ ಪ್ರದೀಪ್ ರಾಜ್ ಗೆ ಕೊರೊನಾ ಸೋಂಕು ತಗುಲಿತ್ತು. ಇದೀಗ ಅವರು ಚಿಕಿತ್ಸೆ ಫಲಿಸದೇ ಇಂದು ಬೆಳಗ್ಗಿನ ಜಾವ 3 ಗಂಟೆ ಸುಮಾರಿಗೆ ಮೃತಪಟ್ಟಿದ್ದಾರೆ.
ಯಶ್ ಅಭಿನಯದ ಕಿರಾತಕ ಸಿನಿಮಾ ಪ್ರದೀಪ್ ರಾಜ್ ಗೆ ದೊಡ್ಡ ಹೆಸರು ತಂದುಕೊಟ್ಟಿತ್ತು. ಬಳಿಕ ದುನಿಯಾ ವಿಜಯ್ ಗೆ ರಜನಿಕಾಂತ, ಸತೀಶ್ ಅಭಿನಯದ ಅಂಜದ ಗಂಡು, ಗಣೇಶ್ ಗೆ ಮಿಸ್ಟರ್ 420, ಬೆಂಗಳೂರು 23 ಸೇರಿದಂತೆ ಹಲವು ಚಿತ್ರಗಳನ್ನು ನಿರ್ದೇಶಿಸಿದ್ದರು. ಸದ್ಯ ಕಿರಾತಕ -2 ಸಿನಿಮಾ ರಿಲೀಸ್ ಗೆ ರೆಡಿ ಇದೆ.
ಪಾಂಡಿಚೆರಿಯಲ್ಲಿ ಇಂದು ಮಧ್ಯಾಹ್ನ ಮೃತರ ಅಂತ್ಯಕ್ರಿಯೆ ನೆರವೇರಿಸೋಕೆ ಕುಟುಂಬ ತೀರ್ಮಾನಿಸಿದೆ. ಪ್ರದೀಪ್ ರಾಜ್ ಅವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನ ಅಗಲಿದ್ದಾರೆ.
You must be logged in to post a comment Login