Connect with us

    KARNATAKA

    ಅ.1ರಿಂದ ಚಿತ್ರಮಂದಿರಗಳು ಪುನರಾರಂಭ ನಿರೀಕ್ಷೆ

    ಬೆಂಗಳೂರು: ಕರೊನಾದಿಂದಾಗಿ 6 ತಿಂಗಳಿಂದ ಮುಚ್ಚಿರುವ ಚಲನಚಿತ್ರಮಂದಿರಗಳು ಅ.1ರಿಂದ ಪುನಾರಂಭವಾಗುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಸಿನಿಮಾ ಬಿಡುಗಡೆಗೆ ಪೂರ್ವ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಡಿ.ಆರ್.ಜೈರಾಜ್ ತಿಳಿಸಿದ್ದಾರೆ.

    ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ದಕ್ಷಿಣ ಭಾರತ ಚಲನಚಿತ್ರ ವಾಣಿಜ್ಯ ಮಂಡಳಿಯೊಂದಿಗೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಆನ್​ಲೈನ್ ಮೂಲಕ ಸಭೆ ನಡೆಸಿದ್ದಾರೆ.

    ಚಿತ್ರೋದ್ಯಮದ ಕಷ್ಟ-ನಷ್ಟಗಳನ್ನು ವಿವರಿಸಿ, ಟಾಕೀಸ್​ಗಳ ಪುನರಾರಂಭಕ್ಕೆ ಅವಕಾಶ ನೀಡಬೇಕು ಎಂದು ಮನವಿ ಮಾಡಿಕೊಳ್ಳಲಾಗಿದೆ. ಕೇಂದ್ರ ಗೃಹ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿ, ಸೆಪ್ಟಂಬರ್ 2ನೇ ವಾರ ಪ್ರಮಾಣಿತ ಕಾರ್ಯವಿಧಾನ (ಎಸ್​ಒಪಿ) ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದ್ದಾರೆ ಎಂದು ವಿವರಿಸಿದರು.

     ಸಿಎಂ ಭರವಸೆ: ಚಿತ್ರೋದ್ಯಮಕ್ಕೆ ಕರೊನಾ ತಂದೊಡ್ಡಿದ ಸಂಕಷ್ಟದ ಕುರಿತು ಮುಖ್ಯಮಂತ್ರಿಗೆ ನಿವೇದಿಸಿದ್ದು, ಪರಿಹಾರ ಪ್ಯಾಕೇಜ್ ನೀಡಿ, ಅಗತ್ಯ ನೆರವಿಗೆ ಬರಬೇಕು ಎಂದು ವಿನಂತಿಸಲಾಗಿದೆ. ಸಂಬಂಧಿಸಿದ ಇಲಾಖೆಗಳೊಂದಿಗೆ ರ್ಚಚಿಸಿ ಆದ್ಯತೆ ಮೇಲೆ ಸಮಸ್ಯೆ ಬಗೆಹರಿಸಲು ಕ್ರಮಕೈಗೊಳ್ಳುವುದಾಗಿ ಸಿಎಂ ಭರವಸೆ ನೀಡಿದ್ದಾರೆ ಎಂದು ಜೈರಾಜ್ ಹೇಳಿದರು.

    Share Information
    Advertisement
    Click to comment

    You must be logged in to post a comment Login

    Leave a Reply