UDUPI
ಮಲ್ಪೆ : ಆರ್ಥಿಕ ನಷ್ಟ ಬೋಟ್ ಗೆ ನೇಣು ಬೀಗಿದು ಆತ್ಮಹತ್ಯೆ
ಭಾಗ್ಯರಾಜ್ಯ ಆತ್ಮಹತ್ಯೆ ಮಾಡಿಕೊಂಡ ಯುವಕ
ಉಡುಪಿ ಜೂನ್ 10: ಆರ್ಥಿಕ ಸಂಕಷ್ಟದಿಂದಾಗಿ ಯುವಕನೊಬ್ಬ ಮಲ್ಪೆ ಬಂದರಿನಲ್ಲಿ ಬೋಟ್ ನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಲ್ಪೆಯಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವಕನನ್ನನು ತೊಟ್ಟಂ ಸಮೀಪದ ಪೌಂಜಿ ಗುಡ್ಡೆ ನಿವಾಸಿ ಭಾಗ್ಯರಾಜ್ ಎಂದು ಗುರುತಿಸಲಾಗಿದೆ.
ಭಾಗ್ಯರಾಜ್ ಸಾಲ ಮಾಡಿ ಮನೆ ಮತ್ತು ಮೀನುಗಾರಿಕಾ ಬೋಟ್ ನ್ನು ಖರೀದಿಸಿದ್ದರು. ಆದರೆ ಲಾಕ್ ಡೌನ್ ನಿಂದಾಗಿ ವ್ಯವಹಾರದಲ್ಲಿ ತೀರ ನಷ್ಟ ಉಂಟಾದ ಹಿನ್ನೆಲೆ, ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಲ್ಪೆ ಬಂದರಿನಲ್ಲಿ ಲಂಗರು ಹಾಕಿರುವ ಬೋಟಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಭಾಗ್ಯರಾಜ್ ಉತ್ತಮ ಕಬಡ್ಡಿ ಪಟುವಾಗಿದ್ದರು. ಸ್ಥಳಕ್ಕೆ ಮಲ್ಪೆ ಠಾಣಾ ಪೊಲೀಸರ ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.
You must be logged in to post a comment Login