Connect with us

    LATEST NEWS

    ಮಂಗಳೂರಿನ ಖ್ಯಾತ ವಕೀಲರ ಮೇಲೆ ಲೈಂಗಿಕ ದೌರ್ಜನ್ಯ ದೂರು ದಾಖಲು

    ಮಂಗಳೂರು ಅಕ್ಟೋಬರ್ 19: ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿ ಇಂಟರ್ನ್ ಶಿಫ್ ವಿಧ್ಯಾರ್ಥಿನಿಯೊಬ್ಬಳು ಮಂಗಳೂರಿನ ಖ್ಯಾತ ವಕೀಲ K.S.N.ರಾಜೇಶ್ ಭಟ್ ವಿರುದ್ದ ದೂರು ನೀಡಿದ್ದು, ವಿಧ್ಯಾರ್ಥಿನಿಯ ದೂರಿನ ಆಧಾರದ ಮೇಲೆ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

    ರಾಜೇಶ್ ಭಟ್ ಕಚೇರಿಯಲ್ಲಿ ಉತ್ತರ ಪ್ರದೇಶ ಮೂಲದ ವಿದ್ಯಾರ್ಥಿನಿ ಇಂಟರ್ನಶಿಪ್ ಮಾಡಲು ಬಂದಿದ್ದಳು. ಕಚೇರಿಯಲ್ಲೇ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆನ್ನಲಾಗಿದೆ. ಖಾಸಗಿ ಅಂಗಗಳನ್ನು ಮುಟ್ಟಿ ಅಸಭ್ಯವಾಗಿದ ವರ್ತಿಸಿದ್ದಾರೆಂದು ಸಂತ್ರಸ್ತೆ ದೂರು ನೀಡಿದ್ದಾರೆ.

    ಅಲ್ಲದೆ ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಸಂತ್ರಸ್ತೆ ಮತ್ತು ವಕೀಲ ಮಾತನಾಡಿದ್ದಾರೆ ಎನ್ನಲಾಗಿರುವ 11 ನಿಮಿಷ 55 ಸೆಕೆಂಡ್ಸ್ ಇರುವ ಆಡಿಯೋ ದಲ್ಲಿ ರಾಜೇಶ್ ಭಟ್, ‘‘ನಾನು ತಪ್ಪು ಮಾಡಿದ್ದೇನೆ, ಕ್ಷಮಿಸಿ ಬಿಡು’’ ಎಂದು ಬೇಡಿಕೊಳ್ಳುವ ಆಡಿಯೋ ಕಳೆದ ಒಂದು ವಾರದಿಂದ ವೈರಲ್ ಆಗಿದ್ದ ಹಿನ್ನೆಲೆಯಲ್ಲಿ ಮಂಗಳೂರು ಕಮಿಷನರ್‌ಗೆ ಎಬಿವಿಪಿ ದೂರು ನೀಡಿತ್ತು. ಆಡಿಯೋ ಆಧರಿಸಿ ವಕೀಲರ ವಿರುದ್ಧ ಕ್ರಮಕ್ಕೆ ಮಂಗಳೂರು ಎಬಿವಿಪಿ ಘಟಕ ಆಗ್ರಹಿಸಿತ್ತು.

    ಆಡಿಯೋದಲ್ಲಿ ವಿಧ್ಯಾರ್ಥಿನಿ ನೀವು ರೇಪಿಸ್ಟ್‌ಗಿಂತ ಕಡಿಮೆ ಇಲ್ಲ. ನಾನು ಕಚೇರಿಗೆ ಬರಲ್ಲ, ನಿಮ್ಮ ಮುಖ ನೋಡೋಕೆ ಇಷ್ಟವಿಲ್ಲ’ ಎಂದು ಸಂತ್ರಸ್ತ ಯುವತಿ ಪ್ರತಿಕ್ರಿಯೆ ನೀಡಿದ್ದಾರೆ.
    ಎರಡೂ ಕೈಮುಗಿದು ಬೇಡಿಕೊಳ್ಳುತ್ತೇನೆ ದಯವಿಟ್ಟು ಕ್ಷಮಿಸಿ, ಮತ್ತೆ ಇಂಟರ್ನ್‌ಶಿಪ್‌ಗೆ ಬಾ’ ಎಂದು ರಾಜೇಶ್ ಭಟ್ ಹೇಳಿದಾಗ, ‘ಕಚೇರಿಗೆ ಬಂದ್ರೆ ಕಚೇರಿಯಲ್ಲಿ ರೆಕಾರ್ಡ್ ಆಗಿರುವ ವಿಡಿಯೋ ಡಿಲೀಟ್ ಮಾಡುತ್ತೀರಾ?’ ಎಂದು ಸಂತ್ರಸ್ತೆ ಕೇಳಿದ್ದಾರೆ. ‘2 ಹೆಣ್ಣು ಮಕ್ಕಳ ತಂದೆ ಆಗಿರುವ ನೀವು ಈ ರೀತಿ ಮಾಡಿದ್ದು ತಪ್ಪು. ನನಗೆ ಇನ್ಮುಂದೆ ಫೋನ್ ಮಾಡಬೇಡಿ’ ಎಂದು ಖಡಕ್ ಎಚ್ಚರಿಕೆ ನೀಡಿ ಸಂತ್ರಸ್ತೆ ಫೋನ್ ಕಟ್ ಮಾಡಿರುವುದು ಆಡಿಯೋದಲ್ಲಿ ದಾಖಲಾಗಿದೆ. ಸಂತ್ರಸ್ತೆ ಜತೆ ಮಾತಾಡುತ್ತಾ ಕಣ್ಣೀರಿಟ್ಟಿರುವ ರಾಜೇಶ್ ಭಟ್, ಪರಿಪರಿಯಾಗಿ ಕ್ಷಮಿಸು ಎಂದು ಬೇಡಿಕೊಂಡಿರುವುದೂ ದಾಖಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply