LATEST NEWS
ಇನ್ಸ್ಟಾ ಗ್ರಾಂ ಪೇಜ್ ಗಳಲ್ಲಿ ಕೋಮು ಸೌಹಾರ್ದತೆ ಹಾಳುಗೆಡುವ ಪೋಸ್ಟ್ – ಪ್ರಕರಣ ದಾಖಲು

ಮಂಗಳೂರು ಜೂನ್ 01: ಸಾಮಾಜಿಕ ಜಾಲತಾಣದ ಮೇಲೆ ಮಂಗಳೂರು ಪೊಲೀಸರು ಹದ್ದಿನ ಕಣ್ಣು ಇಟ್ಟಿದ್ದು, ಸಾಮಾಜಿಕ ಜಾಲತಾಣದಲ್ಲಿ ಕೋಮು ಸೌಹಾರ್ದತೆ ಹಾಳುಗೇಡುವ ಪೋಸ್ಟ್ ಹಾಕುತ್ತಿರುವವರ ವಿರುದ್ದ ಪ್ರಕರಣ ದಾಖಲಿಸಲಾಗುತ್ತಿದೆ. ಇಂದು ಎರಡು ಇನ್ಸ್ಟಾ ಗ್ರಾಂ ಪೇಜ್ ವಿರುದ್ದ ಪ್ರಕರಣ ದಾಖಲಾಗಿದೆ.
ಸಾಮಾಜಿಕ ಜಾಲತಾಣವಾದ Instagram ಖಾತೆಯ“mangalore_ beary_warrior_03” ಎಂಬ ಪೇಜ್ ನಲ್ಲಿ ವ್ಯಕ್ತಿಯೋರ್ವನು ಇತ್ತೀಚೆಗೆ ಜಿಲ್ಲೆಯಲ್ಲಿ ನಡೆದ ಕೊಲೆ ಪ್ರಕರಣದ ಆರೋಪಿಗಳ ಭಾವಚಿತ್ರವನ್ನು ಹೊಂದಿರುವ ಪೋಸ್ಟ್ ಹಾಕಿ, ಅದರೊಂದಿಗೆ ವಿಭಿನ್ನ ಸಮುದಾಯಗಳ ನಡುವೆ ವೈಮನಸ್ಸು ಉಂಟಾಗಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆಗಳಿರುವಂತಹ ಸಂದೇಶವನ್ನು ಬರೆದಿರುವ ಹಿನ್ನೆಲೆಯಲ್ಲಿ ಆರೋಪಿತನ ವಿರುದ್ದ ದಿನಾಂಕ: 01.06.2025 ರಂದು ಬೆಳ್ತಂಗಡಿ ಠಾಣೆಯಲ್ಲಿ ಅಕ್ರ ನಂ : 41/2025 ಕಲಂ: 55,103,353(2) ಬಿಎನ್ ಎಸ್ 2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದ್ದು, ಮುಂದಿನ ಕಾನೂನುಕ್ರಮ ಕೈಗೊಳ್ಳಲಾಗುವುದು

ಇನ್ನೊಂದು ಸಾಮಾಜಿಕ ಜಾಲತಾಣವಾದ Instagram ನ bantwal_hindu_warriors ಎಂಬ ಖಾತೆಯಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆ ಉಂಟು ಮಾಡುವಂತಹ ಹಾಗೂ ಕೋಮು ಸೌಹಾರ್ದತೆಯನ್ನು ಹಾಳುಗೆಡವುವಂತಹ ಪೋಸ್ಟ್ ಪ್ರಸಾರ ಮಾಡಿರುವುದಾಗಿದೆ. ಇದರಿಂದಾಗಿ ಕಾನೂನು ಸುವ್ಯವಸ್ಥೆಗೆ ದಕ್ಕೆಯಾಗುವ ಸಾಧ್ಯತೆಗಳಿರುವುದರಿಂದ ಈ ಬಗ್ಗೆ ದಿನಾಂಕ: 01.06.2025 ರಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ.ಕ್ರ:25/2025 ಕಲಂ: 196(1)(ಎ), 353(1) (ಸಿ) BNS 2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದ್ದು, ಮುಂದಿನ ಕಾನೂನುಕ್ರಮ ಕೈಗೊಳ್ಳಲಾಗುವುದು.