FILM
ತಮಿಳು ನಟ ಸೂರ್ಯ ಮತ್ತು ನಟಿ ಜ್ಯೋತಿಕಾ ವಿರುದ್ದ ಎಫ್ಐಆರ್….!!
ಚೆನ್ನೈ ಮೇ 05: ಜೈ ಭೀಮ್ ಸಿನೆಮಾದ ವಿವಾದಕ್ಕೆ ಸಂಬಂಧಿಸಿದಂತೆ ತಮಿಳ ನಟ ಸೂರ್ಯ ಮತ್ತು ಅವರ ಪತ್ನಿ ನಟಿ ಜ್ಯೋತಿಕಾ ವಿರುದ್ದ ಎಪ್ಐಆರ್ ದಾಖಲಿಸುವಂತೆ ಚೆನ್ನೈನ ನ್ಯಾಯಲಯ ಪೊಲೀಸರಿಗೆ ಆದೇಶಿಸಿದೆ.
ಜೈ ಭೀಮ್ ಸಿನೆಮಾದಲ್ಲಿ ವನ್ನಿಯಾರ್ ಸಮುದಾಯದ ಪ್ರತಿಷ್ಠೆಗೆ ಕಳಂಕ ತಂದಿದ್ದಾರೆ ಎಂಬ ಆರೋಪದ ಮೇಲೆ ರಾಜಕೀಯ ಸಂಘಟನೆ ಪಟ್ಟಾಲಿ ಮಕ್ಕಳ್ ಕಚ್ಚಿಯಿಂದ 5 ಕೋಟಿ ರೂಪಾಯಿ ಪರಿಹಾರಕ್ಕೆ ಒತ್ತಾಯಿಸಿ ಸೂರ್ಯ ಅವರಿಗೆ ಲೀಗಲ್ ನೋಟಿಸ್ ನೀಡಲಾಗಿತ್ತು. ಈ ಸಂಬಂಧ ರುದ್ರ ವನ್ನಿಯಾರ್ ಸೇನೆ ಎಂಬ ವನ್ನಿಯಾರ್ ಗುಂಪು ಅರ್ಜಿ ಸಲ್ಲಿಸಿದ್ದು, ಸಿನಿಮಾದಲ್ಲಿ ಸಮುದಾಯದ ಜನರನ್ನು ಅತ್ಯಂತ ಕೀಳುಮಟ್ಟದಲ್ಲಿ ಚಿತ್ರಿಸಲಾಗಿದೆ ಎಂದು ಆರೋಪಿಸಿದ್ದಾರೆ.
ಏಪ್ರಿಲ್ 29 ರಂದು ಚೆನ್ನೈ ಸೈದಾಪೇಟ್ ನ್ಯಾಯಾಲಯದಲ್ಲಿ ಅರ್ಜಿ ವಿಚಾರಣೆಗೆ ಬಂದಿತು. ವರದಿಗಳ ಪ್ರಕಾರ, ಅರ್ಜಿದಾರರ ವಾದವನ್ನು ಆಲಿಸಿದ ನ್ಯಾಯಾಲಯವು ಸೂರ್ಯ, ಜ್ಯೋತಿಕಾ ಮತ್ತು ಜ್ಞಾನವೇಲ್ ವಿರುದ್ಧ ಎಫ್ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಪೊಲೀಸ್ ಇಲಾಖೆಗೆ ಆದೇಶ ನೀಡಿದೆ. ಮುಂದಿನ ವಿಚಾರಣೆಯನ್ನು ಮೇ 20ಕ್ಕೆ ಮುಂದೂಡಲಾಗಿದೆ.
You must be logged in to post a comment Login