Connect with us

    LATEST NEWS

    ಕುಡಿಯವ ನೀರಿಗೂ ಹೊತ್ತಿಕೊಳ್ತಿದೆ ಬೆಂಕಿ ; ಮಂಗಳೂರಿನಲ್ಲೊಂದು ವಿಚಿತ್ರ ವಿದ್ಯಮಾನ

    ಕುಡಿಯವ ನೀರಿಗೂ ಹೊತ್ತಿಕೊಳ್ತಿದೆ ಬೆಂಕಿ ; ಮಂಗಳೂರಿನಲ್ಲೊಂದು ವಿಚಿತ್ರ ವಿದ್ಯಮಾನ

    ಮಂಗಳೂರು, ನವೆಂಬರ್ 09 : ಬೆಂಕಿ ಹಚ್ಚಿದರೆ ಬಾವಿ ನೀರು ಉರಿಯುವ ವಿಲಕ್ಷಣ ಘಟನೆ ಮಂಗಳೂರಿನ ದೇರಳಕಟ್ಟೆಯಲ್ಲಿ ಕಂಡುಬಂದಿದೆ. ಬೆಳ್ಮ ಗ್ರಾಮ ಪಂಚಾಯತ್ ವ್ಯಾಪ್ತಿಯ ದೇರಳಕಟ್ಟೆ ಸಮೀಪದ ಕಾನಕೆರೆ ಎಂಬಲ್ಲಿ ಈ ಘಟನೆ ನಡೆಯುತ್ತಿದೆ.

    ಕಾನಕೆರೆಯ ನಾಲ್ಕು ಬಾವಿಗಳ ನೀರಿನಲ್ಲಿ ಪೆಟ್ರೋಲಿಯಂ ಅಂಶ ಕಂಡುಬರುತ್ತಿದೆ ಎಂದು ಸ್ಥಳೀಯರು ದೂರಿದ್ದಾರೆ.

    ಕಾನಕೆರೆ ಪ್ರದೇಶ ಜನವಸತಿ ಹೊಂದಿದ್ದು, ಇಲ್ಲಿ ಹಲವು ತೆರೆದ ಬಾವಿಗಳಿವೆ.

    ಈ ಪೈಕಿ ನಾಲ್ಕು ಬಾವಿಗಳಲ್ಲಿನ ನೀರು ಪೆಟ್ರೋಲ್ ವಾಸನೆಯಿಂದ ಕೂಡಿದ್ದು, ಬೆಂಕಿ ಕೊಟ್ಟರೆ ಹೊತ್ತಿ ಉರಿಯುತ್ತಿದೆ. ಇದು ಸ್ಥಳೀಯ ನಿವಾಸಿಗಳನ್ನು ಆತಂಕಿತರನ್ನಾಗಿಸಿದೆ.

    ಕಳೆದೆರಡು ದಿನಗಳಿಂದ ಇಂತಹ ಪ್ರಕರಣ ನಡೆಯುತ್ತಿದ್ದರೂ ಯಾರೂ ಇದನ್ನು ಗಂಭೀರವಾಗಿ ಪರಿಗಣಿಸಿರಲಿಲ್ಲ. ರಾತ್ರಿ ಬಾವಿಗಳನ್ನು ಪರಿಶೀಲಿಸಿದಾಗ ಇದು ಬೆಳಕಿಗೆ ಬಂದಿದೆ.

    ಈ ಬಗ್ಗೆ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಆದರೆ ರಾತ್ರಿಯವರೆಗೆ ಅಗ್ನಿಶಾಮಕ ದಳ ಇತ್ತ ಆಗಮಿಸಿಲ್ಲ ಎಂದು ಸ್ಥಳೀಯರು ದೂರಿದ್ದಾರೆ.

    ದೇರಳಕಟ್ಟೆ ಜಂಕ್ಷನ್ನಲ್ಲಿರುವ ಪೆಟ್ರೋಲ್ ಪಂಪ್ ನ ತೈಲ ಬಾವಿ ಲೀಕೇಜ್ ಆಗಿರುವುದು ಇದಕ್ಕೆ ಕಾರಣ ಎನ್ನಲಾಗುತ್ತಿದೆ.

    ವಿಡಿಯೋ..

    Share Information
    Advertisement
    Click to comment

    You must be logged in to post a comment Login

    Leave a Reply