ಬೆಳ್ತಂಗಡಿ, ಮಾರ್ಚ್ 27: ತಾಲೂಕಿನ ಪಟ್ರಮೆ ಸಮೀಪದ ಕುತ್ಯಾಡಿಯಲ್ಲಿ ಗೇರು ತೋಪಿಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಘಟನೆ ಮಾರ್ಚ್ 27 ರಂದು ನಡೆದಿದೆ. ಸ್ಥಳೀಯ ವ್ಯಕ್ತಿಯೊಬ್ಬರ ಸಮಯ ಪ್ರಜ್ಞೆಯಿಂದ ಬೆಂಕಿ ಮತ್ತಷ್ಟು ವ್ಯಾಪಿಸುವುದು ತಪ್ಪಿದೆ

ರಸ್ತೆಯಲ್ಲಿ ಸಂಚರಿಸುತ್ತಿದ್ದ ವ್ಯಕ್ತಿಯೊಬ್ಬರಿಗೆ ತೋಪಿನೊಳಗೆ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣವೇ ಅವರು ಸುತ್ತಮುತ್ತಲಿನ ಜನರಿಗೆ ಮಾಹಿತಿ ನೀಡಿದರು. ಬಳಿಕ ಸ್ಥಳೀಯರು ಸೇರಿಕೊಂಡು ಬೆಂಕಿ ನಂದಿಸುವ ಕಾರ್ಯಕ್ಕೆ ಮುಂದಾದರು. ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು, ಸ್ಥಳೀಯರ ಸಹಕಾರದೊಂದಿಗೆ ಬೆಂಕಿಯನ್ನು ಸಂಪೂರ್ಣವಾಗಿ ನಿಯಂತ್ರಣಕ್ಕೆ ತಂದರು.