Connect with us

LATEST NEWS

ಬಡಗಬೆಟ್ಟು ಗ್ರಾಮದ ಮಂಚಿ ರಾಜೀವನಗರದ ಮೀಸಲು ಅರಣ್ಯ ಪ್ರದೇಶದಲ್ಲಿ ಬೆಂಕಿ

ಮಣಿಪಾಲ ಜನವರಿ 11: 80 ಬಡಗಬೆಟ್ಟು ಗ್ರಾಮದ ಮಂಚಿ ರಾಜೀವನಗರದ ಮೀಸಲು ಅರಣ್ಯ ಪ್ರದೇಶದಲ್ಲಿ ನಿನ್ನೆ ಮಧ್ಯಾಹ್ನ ಅಗ್ನಿ ಅವಘಡ ಸಂಭವಿಸಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.


ಆಕಸ್ಮಿಕವಾಗಿ ಹ್ತತಿಕೊಂಡ ಬೆಂಕಿ ಇಡೀ ಸುತ್ತಮುತ್ತಲಿನ ಪರಿಸರಕ್ಕೆ ವ್ಯಾಪಕವಾಗಿ ಹರಡಿದೆ. ಇದರಿಂದ ಸುತ್ತಮುತ್ತ ಪರಿಸರದಲ್ಲಿ ಕೆಲಕಾಲ ದಟ್ಟ ಹೊಗೆ ಆವರಿಸಿಕೊಂಡಿತ್ತು. ರಾಜೀವನಗರದ ರತ್ನ‌ ಆಚಾರ್ಯ ಅವರ ಹಡಿಲು ಗದ್ದೆಯ ಹುಲ್ಲು ಗಾವಲು, ಮನೆಯೊಂದರ ಬಳಿ ರಾಶಿ ಹಾಕಿದ್ದ ಕಟ್ಟಿಗೆಯ ರಾಶಿ, ಕಾಡಿನ ಅಕೇಶಿಯ ಮರಗಳು ಬೆಂಕಿಗೆ ಆಹುತಿಯಾಗಿವೆ


ಮೊದಲಿಗೆ ಕಾಡಿನಲ್ಲಿ‌ ಕಾಣಿಸಿಕೊಂಡ ಬೆಂಕಿಯ ಸಣ್ಣ ಕಿಡಿ, ನೋಡ ನೋಡುತ್ತಿದ್ದಂತೆ ವ್ಯಾಪಕವಾಗಿ ಹರಡಿದೆ. ರಾಜೀವನಗರದ 6ನೇ ಅಡ್ಡ ರಸ್ತೆಯ ಬಳಿಯ ಎರಡು ಎಕರೆಯಷ್ಟು ವ್ಯಾಪ್ತಿಯಲ್ಲಿ ಬೆಂಕಿ ಅಟ್ಟಹಾಸ ಮೆರೆದಿದೆ. ಕೂಡಲೇ ಎಚ್ಚೆತ್ತ ಸ್ಥಳೀಯರು ಅಗ್ನಿಶಾಮಕ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬಂದಿ ಕಾರ್ಯಾಚರಣೆ ನಡೆಸಿ ಬೆಂಕಿ‌ ನಂದಿಸಿದರು. ಇದರಿಂದ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ.

 

Share Information
Continue Reading
Advertisement
Click to comment

Leave a Reply

Your email address will not be published. Required fields are marked *