Connect with us

    KARNATAKA

    ಚಲಿಸುತ್ತಿದ್ದ ಬಸ್ಸಿನಲ್ಲಿ ಬೆಂಕಿ, 24 ಜನ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

    ಉತ್ತರಕನ್ನಡ, ಡಿಸೆಂಬರ್ 16: ಚಲಿಸುತ್ತಿದ್ದ ಖಾಸಗಿ ಬಸ್ ನಲ್ಲಿ ಕಾಣಿಸಿ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ. ಎಂಜಿನಲ್ಲಿ ಹೊತ್ತಿಕೊಂಡ ಬೆಂಕಿ, ಇಡೀ ಬಸ್ ಗೆ ಆವರಿಸೋ ಮುನ್ನಾ, ಚಾಲಕ ಗಮನಿಸಿದ್ದಾನೆ. ಕೂಡಲೇ ಬಸ್ ನಲ್ಲಿದ್ದಂತ ಪ್ರಯಾಣಿಕರನ್ನು ಕೆಳೆಗೆ ಇಳಿಸಿದ ಪರಿಣಾಮ, ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿರುವಂತ ಘಟನೆ ಉತ್ತರ ಕನ್ನಡದ ಯಲ್ಲಾಪುರ ಸಮೀಪ ನಡೆದಿದೆ.

    ಮುಂಬೈನಿಂದ ಮಂಗಳೂರು ಕಡೆಗೆ ಸಾಗುತ್ತಿದ್ದಂತ ಖಾಸಗಿ ಬಸ್ ನಲ್ಲಿ ಯಲ್ಲಾಪುರದ ಜೋಡಕೆರೆ ಬಳಿ ಎಂಜಿನ್ ಬೆಳಿಗ್ಗೆ 5 ಗಂಟೆಯ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದಂತ ಚಾಲಕ, ಕೂಡಲೇ ಬಸ್ ನನ್ನ ರಸ್ತೆಯ ಪಕ್ಕಕ್ಕೆ ನಿಲ್ಲಿಸಿ, ಕೂಡಲೇ ಅದರಲ್ಲಿದ್ದಂತ ಪ್ರಯಾಣಿಕರಿಗೆ ಮಾಹಿತಿ ನೀಡಿ, ಕೆಳಗೆ ಇಳಿಸಿದ್ದಾರೆ.

    ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಬರುವ ವೇಳೆಗೆ ಅರ್ಧದಷ್ಟು ಬಸ್ ಸುಟ್ಟು ಭಸ್ಮವಾಗಿದೆ. ಸ್ಥಳಕ್ಕೆ ಆಗಮಿಸಿದಂತ ಅಗ್ನಿಶಾಮಕ ಸಿಬ್ಬಂದಿ ಬಸ್ ಗೆ ಹೊತ್ತಿಕೊಂಡಿದ್ದಂತ ಬೆಂಕಿಯನ್ನು ನಂದಿಸಿದ್ದಾರೆ. ಚಾಲಕನ ಸಮಯ ಪ್ರಜ್ಞೆಯಿಂದ ಬಸ್ ನಲ್ಲಿದ್ದಂತ 24 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply