Connect with us

    KARNATAKA

    ಕೆಜಿಎಫ್‌–2 ಸಿನೆಮಾ ವೀಕ್ಷಣೆ ವೇಳೆ ಶೂಟೌಟ್

    ಶಿಗ್ಗಾವಿ ಎಪ್ರಿಲ್ 20: ಕೆಜಿಎಫ್‌–2 ಸಿನೆಮಾ ವಿಕ್ಷಣೆ ವೇಳೆ ನಡೆದ ಗಲಾಟೆಯಲ್ಲಿ ಯುವಕನೋರ್ವನ ಮೇಲೆ ಥಿಯೇಟರ್ ನಲ್ಲೆ ಗುಂಡಿನ ದಾಳಿ ನಡೆದ ಘಟನೆ ನಡೆದಿದೆ.

    ಗುಂಡೇಟು ತಿಂದ ವ್ಯಕ್ತಿ

    ಶಿಗ್ಗಾವಿ ತಾಲ್ಲೂಕಿನ ಮುಗಳಿ ಗ್ರಾಮದ ವಸಂತಕುಮಾರ ಸಣ್ಣಕಲ್ಲಪ್ಪ ಶಿವಪುರ (28) ಗುಂಡೇಟು ತಿಂದು ಗಾಯಗೊಂಡ ಪ್ರೇಕ್ಷಕ. ಗಂಭೀರವಾಗಿ ಗಾಯಗೊಂಡಿರುವ ಇವರನ್ನು ಹುಬ್ಬಳ್ಳಿಯ ಕಿಮ್ಸ್‌ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಗುಂಡು ಹಾರಿಸಿದ ಆರೋಪಿ ಪರಾರಿಯಾಗಿದ್ದು,

    ಸಿನಿಮಾ ನೋಡುವ ಸಂದರ್ಭ ಮುಂದಿನ ಕುರ್ಚಿಯ ಮೇಲೆ ವಸಂತಕುಮಾರ ಕಾಲಿಟ್ಟಿದ್ದ. ಮುಂದಿನ ಕುರ್ಚಿಯಲ್ಲಿದ್ದ ಆರೋಪಿ ಕಾಲು ತೆಗೆಯುವಂತೆ ಹೇಳಿದ್ದಾನೆ. ಈ ಸಂದರ್ಭ ಇಬ್ಬರ ನಡುವೆ ಮಾತಿನ ಚಕಮಕಿ ಉಂಟಾಗಿ, ಜಗಳ ನಡೆದಿದೆ. ನಂತರ ಆರೋಪಿ ಹೊರಗಡೆ ಹೋಗಿ ಹತ್ತು ನಿಮಿಷದ ನಂತರ ಮತ್ತೆ ಚಿತ್ರಮಂದಿರದ ಒಳಗೆ ಬಂದು, ವಸಂತಕುಮಾರನ ಮೇಲೆ ಪಿಸ್ತೂಲಿನಿಂದ ಮೂರು ಸುತ್ತು ಗುಂಡು ಹಾರಿಸಿದ್ದಾನೆ. ಎರಡು ಗುಂಡುಗಳು ಕಾಲಿಗೆ ಬಿದ್ದಿದ್ದು, ಮತ್ತೊಂದು ‘ಮಿಸ್‌ಫೈರ್‌’ ಆಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply