Connect with us

DAKSHINA KANNADA

ವಿಟ್ಲ ಎಸ್ಐ ವಿನೋದ್ ರೆಡ್ಡಿ ಮೇಲೆ ಗುಂಡಿನ ದಾಳಿ : ಆರೋಪಿ ಪೊಲೀಸ್ ವಶಕ್ಕೆ

ವಿಟ್ಲ, ಮಾರ್ಚ್ 25: ಕರ್ತವ್ಯದಲ್ಲಿದ್ದ ಎಸ್.ಐ.ಮೇಲೆ ಗುಂಡಿನ ದಾಳಿ ನಡೆಸಿದ ದುಷ್ಕರ್ಮಿ ಪೋಲೀಸರ ಅತಿಥಿಯಾದ ಘಟನೆ ವಿಟ್ಲ ಕೊಡಂಗೆ ಚೆಕ್ ಪೋಸ್ಟ್ ನಲ್ಲಿ ಇಂದು ಮುಂಜಾನೆ ವೇಳೆ ನಡೆದಿದೆ.

ವಿಟ್ಲ ಎಸ್ ಐ ವಿನೋದ್ ರೆಡ್ಡಿ ಮೇಲೆ ದುಷ್ಕರ್ಮಿಯಿಂದ ಗುಂಡಿನ ದಾಳಿ ನಡೆದಿದ್ದು. ವಿಟ್ಲ ಸಮೀಪದ ಸಾಲೆತ್ತೂರು ಕೊಡಂಗೆ ಚೆಕ್ ಪೋಸ್ಟ್ ನಲ್ಲಿ ವಿಟ್ಲ ಎಸ್ಐ ವಿನೋದ್ ರೆಡ್ಡಿ ಮತ್ತು ಸಿಬ್ಬಂದಿಗಳು ವಾಹನಗಳ ತಪಾಸಣೆ ನಡೆಸುತ್ತಿದ್ದ ವೇಳೆ ಬಿಳಿ ಬಣ್ಣದ ಕಾರಿನಲ್ಲಿದ್ದ ದುಷ್ಕರ್ಮಿಯೊರ್ವ ಎಸ್ಐ ವಿನೋದ್ ರೆಡ್ಡಿ ಮೇಲೆ ಗುಂಡಿನ ದಾಳಿ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ. ಕೂಡಲೇ ಕಾರ್ಯಚರಣೆ ನಡೆಸಿದ ಸಿಬ್ಬಂದಿ ಗಳು ಆರೋಪಿಯನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ.

ಕೇರಳದಲ್ಲಿ ಗುಂಡಿನ ದಾಳಿ ನಡೆಸಿ ವಿಟ್ಲ ಮೂಲಕ ಪರಾರಿಯಾಗಲು  ಯತ್ನಿಸುತ್ತಿದ್ದಂತೆ ವಿಟ್ಲ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ವಿಟ್ಲ ಎಸ್ಐ ನೇತೃತ್ವದ ತಂಡ ಆರೋಪಿಗಳನ್ನು ಅಡ್ಡಗಟ್ಟಲು ಮುಂದಾದಾಗ ಎಸ್ ಐ ವಿನೋದ್ ರೆಡ್ಡಿ ಅವರ ಮೇಲೆ ದಾಳಿಗೆ ಮುಂದಾಗಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *