Connect with us

    LATEST NEWS

    ಕಾರ್ಕಳ – ಮೀನು ಸಾಗಾಟದ ಲಾರಿ ಮರಕ್ಕೆ ಡಿಕ್ಕಿ – ಇಬ್ಬರಿಗೆ ಗಂಭೀರ ಗಾಯ

    ಕಾರ್ಕಳ ಜೂನ್ 03 : ಮೀನು ಸಾಗಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾದ ಘಟನೆ ನಲ್ಲೂರು ಪರಪ್ಪಾಡಿಯಲ್ಲಿ ನಡೆದಿದ್ದು, ಈ ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿವೆ.


    ಮಲ್ಪೆ ಕಡೆಯಿಂದ ಬೆಂಗಳೂರಿಗೆ ಮೀನು ಸಾಗಿಸುತ್ತಿದ್ದ ಲಾರಿ ಪಾಜೆಗುಡ್ಡೆ ಇಳಿಜಾರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿದೆ. ಬಿದ್ದ ರಭಸಕ್ಕೆ ಲಾರಿಯಲ್ಲಿದ್ದ ಮೀನುಗಳು ಚೆಲ್ಲಾಪಿಲ್ಲಿಯಾಗಿ ಬಿದ್ದುಕೊಂಡಿದೆ.

    ಈ ವಾಹನದಲ್ಲಿ ಚಾಲಕ ಸೇರಿದಂತೆ ಮೂವರಿದ್ದು, ಅವರಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಮೂವರಲ್ಲಿ ಓರ್ವನನ್ನು ಶೃಂಗೇರಿ ಮೂಲದ ನಯಾಜ್ ಅಹಮದ್ ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಗ್ರಾಮ ಪಂಚಾಯತ್ ನ ಸದಸ್ಯ ಸುಮಿತ್‌ ನಲ್ಲೂರು ಸೇರಿದಂತೆ ಸ್ಥಳೀಯರು ಕಾರ್ಕಳ ಆಸ್ಪತ್ರೆಗೆ ದಾಖಲಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply