BANTWAL
ಬೆಳ್ತಂಗಡಿ – ಕೆರೆಗೆ ವಿಷ ಹಾಕಿ ಮೀನುಗಳ ಕೊಂದ ದುಷ್ಕರ್ಮಿಗಳು
ಬೆಳ್ತಂಗಡಿ : ಕೆರೆಗೆ ವಿಷ ಹಾಕಿ ಮೀನುಗಳ ಮಾರಣ ಹೋಮ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯಲ್ಲಿ ಎಂಬಲ್ಲಿ ನಡೆದಿದೆ.
ಕುವೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಗುರುವಾಯನಕೆರೆಗೆ ದುಷ್ಕರ್ಮಿಗಳು ನಿನ್ನೆ ರಾತ್ರಿ ವಿಷ ಹಾಕಿದ್ದಾರೆ ಎಂದು ಆರೋಪಿಸಲಾಗಿದ್ದು, ಕೆರೆಯಲ್ಲಿ ತುಂಬೆಲ್ಲಾ ಮೀನುಗಳು ಸತ್ತು ತೆಲಾಡುತ್ತಿರುವ ದೃಶ್ಯ ಕಂಡು ಬಂದಿದೆ.
ಕೆರೆಯಲ್ಲಿ ಮೀನು ಹಿಡಿಯೋದನ್ನು ಕುವೆಟ್ಟು ಗ್ರಾಮ ಪಂಚಾಯತ್ ನಿಷೇಧಿಸಿದ್ದು, ಈ ಕಾರಣಕ್ಕೆ ನಿನ್ನೆ ರಾತ್ರಿ ಮೀನು ಹಿಡಿಯಲು ಬಂದವರು ಕೆರೆಗೆ ವಿಷ ಹಾಕಿರುವ ಶಂಕೆ ವ್ಯಕ್ತವಾಗಿದೆ.
You must be logged in to post a comment Login