LATEST NEWS
ವಾಯುಭಾರ ಕುಸಿತ ಡಿಸೆಂಬರ್ 6 ರವರೆಗೆ ಮೀನುಗಾರಿಕೆಗೆ ತೆರಳದಂತೆ ಸೂಚನೆ
ವಾಯುಭಾರ ಕುಸಿತ ಡಿಸೆಂಬರ್ 6 ರವರೆಗೆ ಮೀನುಗಾರಿಕೆಗೆ ತೆರಳದಂತೆ ಸೂಚನೆ
ಮಂಗಳೂರು ಡಿಸೆಂಬರ್ 2: ಅರಬೀ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಹಿನ್ನಲೆ ಕರಾವಳಿ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು, ಇನ್ನು ಎರಡು ದಿನ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಂಗಳೂರು ನಗರದಲ್ಲಿ ಇಂದು ಬೆಳಿಗ್ಗೆಯಿಂದಲೇ ಮೋಡ ಕವಿದ ವಾತಾವರಣ ಇತ್ತು. ಸಂಜೆ ವೇಳೆಗೆ ನಿರಂತರವಾಗಿ ಮಳೆ ಸುರಿದಿದ್ದು, ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಸಾರ್ವಜನಿಕರಿಗೆ ಮಳೆಯಿಂದಾಗಿ ಸಮಸ್ಯೆಯಾಯಿತು.
ಅರಬೀ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಬಲಗೊಳ್ಳುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಈ ಹಿನ್ನಲೆಯಲ್ಲಿ ಡಿಸೆಂಬರ್ 6 ರವರೆಗೆ ಮೀನುಗಾರಿಕೆಗೆ ತೆರಳದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದ್ದು, ಮೀನುಗಾರಿಕೆಗೆ ತೆರಳಿರುವ ಎಲ್ಲಾ ಬೋಟುಗಳ ತಕ್ಷಣ ದಡಕ್ಕೆ ವಾಪಾಸ್ ಬರುವಂತೆ ಸೂಚನೆ ನೀಡಿದೆ.
You must be logged in to post a comment Login