LATEST NEWS
ಸಮುದ್ರದಲ್ಲಿ 30 ಗಂಟೆಗಳ ಕಾಲ ಪಾತಿ ದೋಣಿಯಲ್ಲಿ ಜೀವ ಉಳಿಸಿಕೊಂಡ ಮೀನುಗಾರ
ಉಡುಪಿ ಸೆಪ್ಟೆಂಬರ್ 8: ಮೀನುಗಾರಿಕೆಗೆ ತೆರಳಿದ್ದ ಬೋಟ್ ನಿಂದ ನಾಪತ್ತೆಯಾಗಿದ್ದ ಮೀನುಗಾರ 30 ಗಂಟೆಗಳ ನಂತರ ಇಂದು ಮಲ್ಪೆಯಲ್ಲಿ ಪತ್ತೆಯಾಗಿದ್ದಾರೆ. ನಿನ್ನೆ ರಾತ್ರಿ ನಾಪತ್ತೆಯಾಗಿದ್ದ ಉಳ್ಳಾಲ ಹೊಗೆ ನಿವಾಸಿ ಆರ್ಥರ್ ಸುನಿಲ್ ಕುವೆಲ್ಲೋ (45) ಇಂದು ಮಲ್ಪೆ ಬಳಿ ಪತ್ತೆಯಾಗಿದ್ದಾರೆ.
ಪರ್ಸಿನ್ ಬೋಟ್ನಲ್ಲಿ ಉಳ್ಳಾಲ ಉಳಿಯದ 29 ಮಂದಿ ಮೀನುಗಾರಿಕೆಗೆ ತೆರಳಿದ್ದರು. ಬೆಳಗ್ಗೆ ಸುಮಾರು 11.30ಕ್ಕೆ ಬೋಟ್ನ ಬೆಲ್ಟ್ ತುಂಡಾಗಿದ್ದು, ಈ ಸಂದರ್ಭದಲ್ಲಿ ಸಮುದ್ರಕ್ಕೆ ಬೀಸಿದ್ದ ಬಲೆ ಸಂಪೂರ್ಣ ಮುದ್ದೆಯಾಗಿತ್ತು. ಮೀನುಗಾರರು ರಾತ್ರಿವರೆಗೆ ಬಲೆಯನ್ನು ಬಿಡಿಸುವ ಕಾಯಕದಲ್ಲಿ ತೊಡಗಿದ್ದರು. ರಾತ್ರಿ 12 ಗಂಟೆ ಸುಮಾರಿಗೆ ಗಾಳಿ ಮಳೆ ಹೆಚ್ಚಾಗಿ ಬೋಟ್ ಗೆ ಕಟ್ಟಿದ್ದ ಪಾತಿ ಹಗ್ಗ ತುಂಡಾಗಿ ಸಮುದ್ರ ಪಾಲಾಯಿತು.
ಸುನಿಲ್ ಅವರು ಬಲೆ ಎಳೆಯಲೆಂದು ಪಾತಿಯಲ್ಲಿ ಕುಳಿತಿದ್ದರು. ಬೋಟ್ನ ತಾಂತ್ರಿಕ ತೊಂದರೆಯಿಂದಾಗಿ ರಕ್ಷಿಸಲು ಸಾಧ್ಯವಾಗಿಲ್ಲ. ಸೋಮವಾರ ಹಗಲಿಡೀ ಸಮುದ್ರದಲ್ಲಿ ಹುಡುಕಾಡಿದ್ದು ರಾತ್ರಿ ಉಳ್ಳಾಲ ನಾಪತ್ತೆ ಪ್ರಕರಣ ದಾಖಲಿಸಲಾಗಿದೆ. ಪರ್ಸೀನ್ ಬೋಟ್ ನಿಂದ ತಪ್ಪಿಸಿಕೊಂಡಿದ್ದ ಸುನಿಲ್ ಸತತ 30 ಗಂಟೆಗಳ ನಂತರ ಸಮುದ್ರದಲ್ಲಿ ಏಕಾಂಗಿ ಹೋರಾಟ ನಡೆಸಿ ಮಲ್ಪೆಗೆ ಬಂದು ಸೇರಿದ್ದರು. ಅಲ್ಲಿ ಅವರನ್ನು ರಕ್ಷಿಸಲಾಗಿದೆ.
Facebook Comments
You may like
ಮೂತ್ರ ವಿಸರ್ಜನೆಗೆ ಹೋಗಿದ್ದ ಲಾರಿ ಚಾಲಕನ್ನು ತುಳಿದು ಸಾಯಿಸಿದ ಕಾಡಾನೆ
ಸಹಪಾಠಿಯನ್ನು ನಂಬಿ ಹೋದ ವಿದ್ಯಾರ್ಥಿನಿಯ ದುರಂತ ಅಂತ್ಯ..!
ವಿರಾಜಪೇಟೆಯಲ್ಲಿ ಕಾಡಾನೆ ತುಳಿತಕ್ಕೆ ಕಾರ್ಮಿಕ ಸಾವು
ಬೈಕ್ ಗೆ ಡಿಕ್ಕಿ ಹೊಡೆದ ಲಾರಿ ಮಗ ಸಾವು ಅಪ್ಪ ಗಂಭೀರ
ಪೆಟ್ರೋಲ್ ಬೆಲೆ ಏರಿಕೆ ವಿರುದ್ದ ಉಡುಪಿಯಲ್ಲಿ ವಿಭಿನ್ನ ರೀತಿಯ ಪ್ರತಿಭಟನೆ
ಅತ್ತೆಯ ಸಮಾಧಾನಕ್ಕಾಗಿ ಸೊಸೆಯ ಹೆಣ ನೇಣಿಗೆ ಹಾಕಿದ ಅಧಿಕಾರಿಗಳು!
You must be logged in to post a comment Login