Connect with us

    LATEST NEWS

    ಸಮುದ್ರದಲ್ಲಿ ಕಲ್ಲಿಗೆ ಬಡಿದು ಮುಳುಗಿದ ಮೀನುಗಾರಿಕಾ ಬೋಟ್ – ಮೀನುಗಾರರ ರಕ್ಷಣೆ

    ಉಳ್ಳಾಲ ಫೆಬ್ರವರಿ 02: ಮೀನುಗಾರಿಕೆಗೆ ತೆರಳಿ ಹಿಂದಿರುಗುತ್ತಿದ್ದ ಸಂದರ್ಭ ಸಮುದ್ರದಲ್ಲಿ ಕಲ್ಲೊಂದಕ್ಕೆ ಟ್ರಾಲ್ ಬೋಟ್ ಡಿಕ್ಕಿ ಹೊಡಗು ಮುಳುಗಿದ ಘಟನೆ ಉಳ್ಳಾಲದಲ್ಲಿ ನಡೆದಿದೆ. ಈ ವೇಳೆ ಬೋಟ್ ನಲ್ಲಿ ಆರು ಮಂದಿಯನ್ನು ಇತರೆ ಮೀನುಗಾರಿಕಾ ಬೋಟ್ ನವರು ರಕ್ಷಣೆ ಮಾಡಿದ್ದಾರೆ.


    ದುರಂತಕ್ಕೀಡಾಗಿರುವ ಬೋಟ್ ಉಳ್ಳಾಲದ ನಯನಾ ಪಿ. ಸುವರ್ಣ ಎಂಬವರಿಗೆ ಸೇರಿದ್ದಾಗಿದೆ. ನಯನಾರ ಪತಿ ಪ್ರವೀಣ್ ಸುವರ್ಣ ಬೋಟ್ ಚಲಾಯಿಸುತ್ತಿದ್ದರೆ, ಉತ್ತರ ಪ್ರದೇಶ ಮೂಲದ ಮೀನುಗಾರರಾದ ಸಮರ ಬಹಾದ್ದೂರ್, ರಾಮ್ ಮನೋಜ್, ರೋಹಿತ್, ಪ್ರಕಾಶ ಮತ್ತು ವಾಸು ಎಂಬವರು ರಕ್ಷಿಸಲ್ಪಟ್ಟವರು.


    ಪ್ರವೀಣ್ ಸುವರ್ಣ ಹಾಗೂ ಐವರು ಮೀನುಗಾರರು ಗುರುವಾರ ಸಂಜೆ ಮೀನುಗಾರಿಕೆಗೆ ತೆರಳಿದ್ದು, ಮೀನುಗಾರಿಕೆ ಮುಗಿಸಿ ಇಂದು ಮುಂಜಾವ ನಾಲ್ಕು ಗಂಟೆ ಸುಮಾರಿಗೆ ಉಳ್ಳಾಲ ಸಮುದ್ರ ತೀರದ ಮೂಲಕ ದಡಕ್ಕೆ ಆಗಮಿಸುತ್ತಿದ್ದರು. ಈ ವೇಳೆ ಬೋಟ್ ನ ಪ್ರೊಫೈಲರ್ ಗೆ ಸಮುದ್ರದಲ್ಲಿ ಯಾವುದೋ ವಸ್ತು ತಾಗಿ ಅದು ಹಾನಿಯಾಗಿತ್ತು, ಈ ವೇಳೆ ಬೋಟ್ ಸಮುದ್ರದ ತೆರೆಗಳ ಅಬ್ಬರಕ್ಕೆ ಸಿಲುಕಿ ಕಡಲ್ಕೊರೆತದ ಶಾಶ್ವತ ಕಾಮಗಾರಿಯಾದ ರೀಫ್ ಬಳಿ ಹಾಕಿದ್ದ ಸರ್ವೇ ಕಲ್ಲಿಗೆ ಬಡಿದಿದೆ. ಇದರಿಂದ ಹಾನಿಗೊಳಗಾದ ಬೋಟ್ ಮುಳುಗಿದೆ ಎಂದು ತಿಳಿದುಬಂದಿದೆ.

    Share Information
    Advertisement
    Click to comment

    You must be logged in to post a comment Login

    Leave a Reply