KARNATAKA
ಯಾದಗಿರಿ: ಕಾರುಗಳ ಮುಖಾಮುಖಿ ಡಿಕ್ಕಿ – ನೇವಿ ಆಫೀಸರ್ ಪತ್ನಿ, ಮಗಳು ಸೇರಿ 5 ಮೃತ್ಯು..!
ಯಾದಗಿರಿ: ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ನೌಕಾಪಡೆ ಅಧಿಕಾರಿಯ ಪತ್ನಿ ಹಾಗೂ ಮಗಳು ಸೇರಿದಂತೆ ಐವರು ಸ್ಥಳದಲ್ಲೇ ಮೃತಪಟ್ಟ ಘಟನೆ ತೆಲಂಗಾಣದ ನಾರಾಯಣಪೇಟೆಯ ಜಕ್ಲೇರ್ ಎಂಬಲ್ಲಿ ನಡೆದಿದೆ.
ಜಿಲ್ಲೆಯ ಸೈದಾಪುರದ ಗ್ರಾಮದ ಮೌಲಾಲಿ, ಖಲೀಲ್ ಹಾಗೂ ಬಸಮ್ಮ ಮೃತಪಟ್ಟಿದ್ದಾರೆ. ಮತ್ತೊಂದು ಕಾರ್ನಲ್ಲಿದ್ದ ಮಹಾರಾಷ್ಟ್ರ ಮೂಲದ ಪ್ರಬೀತಾ ಹಾಗೂ ಅಸ್ಮಿತಾ ಎಂಬವರು ಸಾವಿಗೀಡಾಗಿದ್ದಾರೆ. ಕರ್ನಾಟಕದ ಕಾರವಾರದಿಂದ ವಿಶಾಖಪಟ್ಟಣಕ್ಕೆ ವರ್ಗಾವಣೆಗೊಂಡಿದ್ದ ಮಹಾರಾಷ್ಟ್ರ ಮೂಲದ ಭಾರತೀಯ ನೌಕಾಪಡೆಯ ಅಧಿಕಾರಿ ದೀಪಕ್ ಪ್ರಯಾಣಿಸುತ್ತಿದ್ದರು. ಹೆಂಡತಿ, ಮಗಳೊಂದಿಗೆ ವಿಶಾಖಪಟ್ಟಣಂಗೆ ತೆರಳುತ್ತಿದ್ದಾಗ ಈ ಅಪಘಾತ ನಡೆದಿದೆ. ಘಟನೆಯಲ್ಲಿ ದೀಪಕ್ ರಾವ್ಗೆ ಗಂಭೀರ ಗಾಯವಾಗಿದ್ದು, ಮಕ್ತಲ್ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.
ಈ ಸಂಬಂಧ ಮಕ್ತಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
You must be logged in to post a comment Login