Connect with us

    DAKSHINA KANNADA

    ಮುಲ್ಕಿ ಪೊಲೀಸರ ಕಾರ್ಯಾಚರಣೆ : ಐವರು ನಟೋರಿಯಸ್ ಕಳ್ಳರ ಬಂಧನ…!!

    ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಮುಲ್ಕಿ ಪೊಲೀಸ್ ಠಾಣಾ ಪೊಲೀಸರು ಮಹತ್ವದ ಕಾರ್ಯಾಚರಣೆಯಲ್ಲಿ ನಟೋರಿಯಸ್ಐವರು ಕಳ್ಳರನ್ನು ಬಂಧಿಸಿದ್ದಾರೆ.

    ಮಂಗಳೂರು: ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಮುಲ್ಕಿ ಪೊಲೀಸ್ ಠಾಣಾ ಪೊಲೀಸರು ಮಹತ್ವದ ಕಾರ್ಯಾಚರಣೆಯಲ್ಲಿ ನಟೋರಿಯಸ್ಐವರು ಕಳ್ಳರನ್ನು ಬಂಧಿಸಿದ್ದಾರೆ.

    ಬಂಧಿತರಿಂದ ಚಿನ್ನಾಭರಣ ಸಹಿತ 7.63 ಲಕ್ಷ ರೂ‌. ಮೊತ್ತದ ಸೊತ್ತುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ಹೊನ್ನೂರು ಮಲಟ್ಟೆ ಹಳ್ಳಿ ಬಾಪೂಜಿ ಬಡಾವಣೆ ನಿವಾಸಿಗಳಾದ ರಘು ಎಸ್.(30), ಮಂಜುನಾಥ (28), ವಿನೋಬ ನಗರ ನಿವಾಸಿ ಪ್ರಮೋದ್ ವಿ.(23), ಆವರಗೇರಿ, ಗೋಶಾಲೆ ನಿವಾಸಿ ಎಚ್.ರವಿಕಿರಣ್ (23) ಆವರಗೆರೆ ನಿವಾಸಿ ದವಲ ಸಾಬ್ (23), ಮಾಳಶೆಟ್ಟಿ ಗ್ರಾಮದ ಹೊನ್ನೂರು ನಿವಾಸಿ ಮಂಜುನಾಥ (29) ಬಂಧಿತ ಆರೋಪಿಗಳಾಗಿದ್ದಾರೆ.

    ಬಂಧಿತ ಆರೋಪಿಗಳು ಎಲ್ಲರೂ ದಾವಣಗೆರೆ ಜಿಲ್ಲೆಯವರಾಗಿದ್ದಾರೆ. ಆರೋಪಿಗಳಿಂದ ಕಳವು ಮಾಡಿದ್ದ ಒಂದು ಹೋಂಡಾ, 1 ರಾಯಲ್‌ ಎನ್ ಫೀಲ್ಡ್, 1 ಕಾರು ಮತ್ತು ಕರಿಮಣಿ ಸರ ಸೇರಿ ಒಟ್ಟು 7.63 ಲಕ್ಷ ರೂ.‌ ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದಿದ್ದಾರೆ.

    ಬಂಧಿತರ ಪೈಕಿ ಮೂವರನ್ನು ನ್ಯಾಯಂಗ ಬಂಧನಕ್ಕೆ ಒಳಪಡಿಸಿದ್ದು, ಇಬ್ಬರನ್ನು ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

    ಸೆಪ್ಟೆಂಬರ್ 17, 2023 ರಂದು ಮೂಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕೊಳ್ನಾಡು ಚಂದ್ರಮೌಳೇಶ್ವರ ರಸ್ತೆಯಲ್ಲಿ ವಾಸವಾಗಿರುವ ವಾಸಂತಿ ಶೆಟ್ಟಿ ಎಂಬುವವರ ಚಿನ್ನದ ಸರವನ್ನು ಕಳವು ಮಾಡಲಾಗಿತ್ತು.

    ಅದೇ ದಿನ ಚಂದ್ರಮೌಳೇಶ್ವರ ಬಸ್ ನಿಲ್ದಾಣದ ಬಳಿ ಸೂರ್ಯಪ್ರಕಾಶ ಎನ್ ಎಂಬವರು ನಿಲ್ಲಿಸಿದ್ದ ಕೆಎ-19-ಇಸಿ-2398 ರ ನೋಂದಣಿ ಸಂಖ್ಯೆಯಲ್ಲಿರುವ ಬಜಾಜ್ ಡಿಸ್ಕವರಿ ಬೈಕ್ ಅನ್ನು ಸಹ ಕಳವು ಮಾಡಲಾಗಿತ್ತು.

    ಎರಡೂ ಕಳ್ಳತನಕ್ಕೆ ಸಂಬಂಧಿಸಿದಂತೆ ಮೂಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

     

    Share Information
    Advertisement
    Click to comment

    You must be logged in to post a comment Login

    Leave a Reply