Connect with us

    DAKSHINA KANNADA

    ದೇರಳಕಟ್ಟೆಯಲ್ಲಿ ಸಾವರ್ಕರ್‌ ಪರ ಕಾಣಿಸಿಕೊಂಡ ಫ್ಲೆಕ್ಸ್ ತೆರವು

    ಮಂಗಳೂರು, ಆಗಸ್ಟ್ 19: ದೇರಳಕಟ್ಟೆ ಮತ್ತು ಅಸೈಗೋಳಿಯಲ್ಲಿ ‘ವಿನಾಯಕ ದಾಮೋದರ ಸಾವರ್ಕರ್ ಅವರಿಗೆ ನಮನಗಳು’ ಎಂದು ಬರೆದು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ರಾಜ್ಯ ಕಾರ್ಯಕಾರಿಣಿ ಸದಸ್ಯ ಎ.ಆರ್. ಫಝಲ್ ಫ್ಲೆಕ್ಸ್ ಹಾಕಿದ್ದರು.

    ಗುರುವಾರ ಸಂಜೆ ಸಾರ್ವಜನಿಕ ಸ್ಥಳದಲ್ಲಿ ಈ ಫ್ಲೆಕ್ಸ್‌ಗಳು ಕಾಣಿಸಿಕೊಂಡಿದ್ದವು. ತಕ್ಷಣ ಎಚ್ಚೆತ್ತ ಕೋಣಾಜೆ ಪೊಲೀಸರು ದೇರಳಕಟ್ಟೆಯಲ್ಲಿ ಹಾಕಿದ್ದ ಫ್ಲೆಕ್ಸ್‌ ಅನ್ನು ತೆರವು ಮಾಡಿದ್ದಾರೆ.

    ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಫಜಲ್, ‘ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ವೀರ ಸಾವರ್ಕರ್ ಅವರಿಗೆ ನಮನ ಸಲ್ಲಿಸುವುದರಲ್ಲಿ ತಪ್ಪೇನಿದೆ. ನಾನು ಭಯೋತ್ಪಾದಕರ ಪರವಾಗಿ ಫ್ಲೆಕ್ಸ್ ಹಾಕಿಲ್ಲ. ದೇಶದ ಸ್ವಾತಂತ್ರ್ಯಕ್ಕಾಗಿ ಒಂದು ದಿವಸ ಆಗಿರಲಿ, 50 ವರ್ಷ ಆಗಿರಲಿ, ಹೋರಾಟ ಮಾಡಿದವರೆಲ್ಲ ಪ್ರಾತಃ ಸ್ಮರಣೀಯರು. ಅಂತಹ ವ್ಯಕ್ತಿಗಳಿಗೆ ಅವಮಾನ ಮಾಡುವುದು ಸರಿಯಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹಿಂದೆ ಉಡುಪಿ ಹಾಗೂ ಸುರತ್ಕಲ್‌ನಲ್ಲಿ ಇದೇ ರೀತಿಯ ಫ್ಲೆಕ್ಸ್‌ ಕಂಡುಬಂದಿತ್ತು.

    Share Information
    Advertisement
    Click to comment

    You must be logged in to post a comment Login

    Leave a Reply