Connect with us

    LATEST NEWS

    ಬೈಂದೂರು ಕಾಂಗ್ರೆಸ್ ಸಮಾವೇಶಕ್ಕೆ ಕೊಲ್ಲೂರು ದೇವಸ್ಥಾನದ ಊಟ : ಸಾರ್ವಜನಿಕರ ಆಕ್ರೋಶ

    ಬೈಂದೂರು ಕಾಂಗ್ರೆಸ್ ಸಮಾವೇಶಕ್ಕೆ ಕೊಲ್ಲೂರು ದೇವಸ್ಥಾನದ ಊಟ : ಸಾರ್ವಜನಿಕರ ಆಕ್ರೋಶ

    ಉಡುಪಿ,ಜನವರಿ 08: ಬೈಂದೂರಿನಲ್ಲಿ ಇಂದು ನಡೆಯುವ ಮುಖ್ಯಮಂತ್ರಿಗಳ ಸಾಧನ ಸಮಾವೇಶಕ್ಕೆ ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಾಲಯದಿಂದ ಊಟದ ವ್ಯವಸ್ಥೆ ಮಾಡಲಾಗಿದೆ.

    ಇದಕ್ಕೆ ಸಾಮಾಜಿಕ ಜಾಲ ತಾಣಗಳಲ್ಲಿ ವ್ಯಾಪಕ ಆಕ್ರೊಶ ವ್ಯಕ್ತವಾಗಿದೆ. ಸಿಎಂ ಸಿದ್ದರಾಮಯ್ಯ ಅವರು ಇಂದು ಉಡುಪಿ ಜಿಲ್ಲೆಯಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಿಲನ್ಯಾಸ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದಾರೆ.

    ಇದೇ ಸಂದರ್ಭದಲ್ಲಿ ಕುಂದಾಪುರದ ಬೈಂದೂರಿನಲ್ಲಿ ಸಾಧನಾ ಸಮಾವೇಶವನ್ನು ಅಯೋಜಿಸಲಾಗಿದೆ. ಈ ಸಮಾವೇಶದಲ್ಲಿ ಸುಮಾರು ಹತ್ತು ಸಾವಿರಕ್ಕೂ ಅಧಿಕ ‌ಕಾರ್ಯಕರ್ತರು ಭಾಗಿಯಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಅವರಿಗೆ ಆಹಾರ ನೀಡುವ ಜವಾಬ್ದಾರಿಯನ್ನು ಕೊಲ್ಲೂರು ದೇವಸ್ಥಾನಕ್ಕೆ ನೀಡಲಾಗಿದೆ.

    ಕಲ್ಲಡ್ಕ ಶಾಲೆಗೆ ಕೊಡದ ಊಟ ಕಾಂಗ್ರೆಸ್ ಕಾರ್ಯಕರ್ತರಿಗೇಕೆ ಕೊಲ್ಲೂರು ದೇವಳದ ಊಟ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಬಿಸಿ ಬಿಸಿ ಚರ್ಚೆ ಆರಂಭಗೊಂಡಿದೆ. ಈ ಹಿಂದೆ ಅರ್ ಎಸ್ ಎಸ್ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ನಡೆಸುವ ಕಲ್ಲಡ್ಕ ಶ್ರೀ ರಾಮ ಶಾಲೆಯ ಮಧ್ಯಾಹ್ನದ ಬಿಸಿ ಊಟಕ್ಕೆ ಕೊಲ್ಲೂರು ದೇವಸ್ಥಾನ ಹಣದ ನೆರವು ನೀಡುತ್ತಿತ್ತು. ಆದರೆ ಸಕಾಲ ಕಾರಣ ನೀಡದೆ ಈ ಅನುದಾನವನ್ನು ಸರ್ಕಾರ ರದ್ದುಗೊಳಿಸಿತ್ತು. ಇದು ಬಿಜೆಪಿ ಮತ್ತು ಅಡಳಿತ ರೂಢ ಕಾಂಗ್ರೇಸ್ ಸರ್ಕಾರ ಮಧ್ಯೆ ತೀವ್ರ ವಾಗ್ಯುದ್ದ, ಪ್ರತಿಭಟನೆ ಹಾಗೂ ಚರ್ಚೆಗಳಿಗೆ ಕಾರಣವಾಗಿತ್ತು.

    Share Information
    Advertisement
    Click to comment

    You must be logged in to post a comment Login

    Leave a Reply