KARNATAKA
ಚಿಕ್ಕಬಳ್ಳಾಪುರದಲ್ಲಿ ವಾಮಾಚಾರದ ಮೊರೆ ಹೋದ ಅಭ್ಯರ್ಥಿಗಳು?
ಚಿಕ್ಕಬಳ್ಳಾಪುರ, ಡಿಸೆಂಬರ್ 21: ಶಿಡ್ಲಘಟ್ಟ ತಾಲೂಕಿನ ಬಶೆಟ್ಟಹಳ್ಳಿ ಗ್ರಾಮ ಪಂಚಾಯಿತಿಯ ಕಂಬಾಲಹಳ್ಳಿಯಲ್ಲಿ ಗೆಲುವು ಸಾಧಿಸಲು ವಾಮಾಚಾರ ಪೂಜೆ ಮಾಟ ಮಂತ್ರದ ಮೊರೆ ಹೋಗಿದ್ದಾರೆ ಎನ್ನಲಾಗಿದೆ. ಮತಗಟ್ಟೆ ಸ್ಥಾಪಿಸಿರುವ ಸರಕಾರಿ ಶಾಲೆಯ ಬಾಗಿಲು ಸೇರಿದಂತೆ ಕಟ್ಟಡದ ನಾಲ್ಕೂ ದಿಕ್ಕುಗಳಲ್ಲೂ ನಿಂಬೆ ಹಣ್ಣುಗಳನ್ನು ಇಟ್ಟು ಪೂಜೆ ಸಲ್ಲಿಸಿರುವುದು ಇದಕ್ಕೆ ಇಂಬು ನೀಡಿದೆ.
ಕಾಂಗ್ರೆಸ್ ಬೆಂಬಲಿತ ಆಭ್ಯರ್ಥಿಯ ಕುಟುಂಬದವರು ಗೆಲುವನ್ನು ತಮ್ಮದಾಗಿಸಿಕೊಳ್ಳಲು ಈ ವಾಮಾಚರದ ತಂತ್ರಕ್ಕೆ ಮೊರೆ ಹೋಗಿದ್ದಾರೆ ಎನ್ನುವುದು ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಹಾಗೂ ಗ್ರಾಮಸ್ಥರ ಆರೋಪವಾಗಿದೆ. ಚುನಾವಣೆಗೆ ನಿಂತ ದಾಸಮ್ಮನ ಪತಿ ವೆಂಕಟಪ್ಪ, ಮಗ ರಾಮಾಂಜಿ ಈ ವಾಮಾಚಾರ ಮಾಡಿದ್ದಾರೆ ಎಂದು ಗ್ರಾಮಸ್ಥರು ದಿಬ್ಬೂರಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಪೊಲೀಸರು ಹಾಗೂ ಚುನಾವಣಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಕಂಬಾಲಹಳ್ಳಿ, ದೊಡ್ಡಗುಮ್ಮನಹಳ್ಳಿ ಸೇರಿ ಮೂರು ಗ್ರಾಮಗಳ 450 ಮತದಾರರಿದ್ದು, ವಾಮಾಚಾರ ಘಟನೆಯಿಂದ ಭಯಭೀತರಾಗಿದ್ದಾರೆ. ಈ ಮಧ್ಯೆ ಗ್ರಾಮಸ್ಥರು ವಾಮಾಚಾರ ನಡೆಸಿದ್ದು ಅಲ್ಲಿಗೆ ಬಂದರೆ ನಮಗೇನಾದರೂ ಕೇಡು ಉಂಟಾದರೆ, ಮತ ಹಾಕಲು ಬರೋದೆ ಇಲ್ಲ ಎಂದು ಹೇಳುತ್ತಿದ್ದಾರೆ.
Facebook Comments
You may like
-
ನೂತನ ಸಚಿವರಿಗೆ ಖಾತೆ ಹಂಚಿಕೆ..ನೂತನ ಸಚಿವ ಅಂಗಾರರಿಗೆ ಮೀನುಗಾರಿಕೆ
-
ಶಾಸಕ ಯತ್ನಾಳ್ ಬಾಯಿ ಮುಚ್ಚದಿದ್ದರೆ ಕೇಂದ್ರ ನಾಯಕರಿಂದ ಸೂಕ್ತ ಕ್ರಮ – ಡಿವಿ ಸದಾನಂದ ಗೌಡ
-
ಒಂದೆರಡು ದಿನಗಳಲ್ಲಿ ಎಲ್ಲಾ ಭಿನ್ನಮತ ಶಮನ – ಬಿವೈ ರಾಘವೇಂದ್ರ
-
ಅಣ್ಣಾಮಲೈಯವರ ಅನುಭವದ ಬುತ್ತಿ ‘ಸ್ಟೆಪ್ಪಿಂಗ್ ಬಿಯಾಂಡ್ ಖಾಕಿ’ 18ರಂದು ಬಿಡುಗಡೆ
-
ಕೊರೊನಾ ಲಸಿಕೆ ವಿಚಾರದಲ್ಲೂ ಅಪಪ್ರಚಾರ ಮಾಡುತ್ತಿರುವುದು ದುರ್ದೈವ ಸಂಗತಿ
-
ಇವರ ಮಧ್ಯ ಕುಳಿತುಕೊಳ್ಳಲು ಕೊರೋನಾಕ್ಕೂ ಜಾಗ ಇಲ್ಲ….!!
You must be logged in to post a comment Login