Connect with us

FILM

ನಟ ಗಣೇಶ್ ಗೆ ಅರಣ್ಯ ಇಲಾಖೆಯಿಂದ ನೋಟಿಸ್

Share Information

ಚಾಮರಾಜನಗರ: ಬಂಡಿಪುರ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದ ಸೂಕ್ಷ್ಮ ವಲಯದಲ್ಲಿ ಬೃಹತ್ ಕಟ್ಟಡ ನಿರ್ಮಿಸುತ್ತಿರವು ನಟ ಗಣೇಶ್ ಗೆ ಅರಣ್ಯ ಇಲಾಖೆ ನೋಟೀಸ್ ನೀಡಿದ್ದು, ತಕ್ಷಣ ಕಾಮಗಾರಿ ನಿಲ್ಲಿಸುವಂತೆ ಸೂಚನೆ ನೀಡಿದೆ.


ಗುಂಡ್ಲುಪೇಟೆ ತಾಲ್ಲೂಕಿನ ಹಂಗಳ ಹೋಬಳಿಯ ಜಕ್ಕಳ್ಳಿ ಗ್ರಾಮದ ಸರ್ವೆ ನಂಬರ್ 105ರಲ್ಲಿ ಗಣೇಶ್‌ ಅವರು 1 ಎಕರೆ 24 ಗುಂಟೆ ಜಮೀನು ಹೊಂದಿದ್ದಾರೆ. ಮನೆ ಹಾಗೂ ತೋಟಗಾರಿಕೆ ಉದ್ದೇಶಕ್ಕೆ ತಾತ್ಕಾಲಿಕ ಕಟ್ಟಡ ನಿರ್ಮಾಣಕ್ಕೆ ಬಂಡೀಪುರ ಪರಿಸರ ಸೂಕ್ಷ್ಮ ವಲಯ ಮೇಲ್ವಿಚಾರಣಾ ಸಮಿತಿಯಿಂದ ಅನುಮತಿ ಪ‍ಡೆದಿದ್ದರು. ಆದರೆ, ಅವರು ಬೃಹತ್‌ ಕಟ್ಟಡ ನಿರ್ಮಿಸಲು ಸಿದ್ಧತೆ ಮಾಡಿಕೊಂಡಿದ್ದರು. ದೊಡ್ಡ ಕಾಂಕ್ರೀಟ್‌ ಪಿಲ್ಲರ್‌ಗಳನ್ನು ಜಮೀನಿನಲ್ಲಿ ನಿರ್ಮಾಣ ಮಾಡಲಾಗಿತ್ತು.


‘ಪರಿಸರ ಸೂಕ್ಷ್ವ ವಲಯದಲ್ಲಿ ಶಾಶ್ವತ ಕಟ್ಟಡ ನಿರ್ಮಾಣಕ್ಕೆ ಅವಕಾಶ ಇಲ್ಲ. ಗಣೇಶ್‌ ನಿರ್ಮಿಸುತ್ತಿರುವುದು ಶಾಶ್ವತ ಕಟ್ಟಡ ಎಂದು ಮೇಲ್ನೋಟಕ್ಕೆ ಕಾಣಿಸುತ್ತಿದೆ. ಅರಣ್ಯ ಇಲಾಖೆ ಇದಕ್ಕೆ ಅವಕಾಶ ನೀಡಬಾರದು’ ಎಂದು ಪರಿಸರವಾದಿಗಳು ಆಗ್ರಹಿಸಿದ್ದರು. ಈ ಸಂಬಂಧ‌, ಗುಂಡ್ಲುಪೇಟೆ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ರವೀಂದ್ರ ಅವರು ಬಂಡೀಪುರ ಹುಲಿ ಯೋಜನೆ ನಿರ್ದೇಶಕ ಪಿ.ರಮೇಶ್‌ಕುಮಾರ್‌ ಅವರಿಗೆ ವರದಿ ಸಲ್ಲಿಸಿದ್ದು, ಅದರ ಆಧಾರದಲ್ಲಿ ನಿರ್ದೇಶಕರು ಗಣೇಶ್‌ ಅವರಿಗೆ ಇದೇ 14ರಂದು ರಮೇಶ್‌ಕುಮಾರ್‌ ನೋಟಿಸ್‌ ಜಾರಿ ಮಾಡಿದ್ದಾರೆ.


Share Information
Advertisement
Click to comment

You must be logged in to post a comment Login

Leave a Reply