Connect with us

    KARNATAKA

    ಕಾಡಾನೆ ದಾಳಿಗೆ ಮೃತಪಟ್ಟ ಶೂಟರ್ ವೆಂಕಟೇಶ್ ಮನೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಭೇಟಿ,ರೂ. 25 ಲಕ್ಷ ಪರಿಹಾರ ಘೋಷಣೆ..!

    ಹಾಸನ ಜಿಲ್ಲೆ ಆಲೂರು ತಾಲೂಕು ಕೆ ಹೊಸಕೋಟೆ ಹೋಬಳಿ ಹಳ್ಳಿಯೂರಿನಲ್ಲಿ ಇತ್ತೀಚೆಗೆ ಕಾಡಾನೆ ಕಾರ್ಯಾಚರಣೆಯ ವೇಳೆ ಕಾಡಾನೆ ದಾಳಿಯಿಂದ ಮೃತಪಟ್ಟ ಶೂಟರ್ ಎಚ್.ಎಚ್. ವೆಂಕಟೇಶ್ ಅವರ ಮನೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಭೇಟಿ ನೀಡಿ ಕುಡುಂಬಕ್ಕೆ ಸಾಂತ್ತಾನ ಹೇಳಿದ್ದಾರೆ.

    ಹಾಸನ : ಹಾಸನ ಜಿಲ್ಲೆ ಆಲೂರು ತಾಲೂಕು ಕೆ ಹೊಸಕೋಟೆ ಹೋಬಳಿ ಹಳ್ಳಿಯೂರಿನಲ್ಲಿ ಇತ್ತೀಚೆಗೆ ಕಾಡಾನೆ ಕಾರ್ಯಾಚರಣೆಯ ವೇಳೆ ಕಾಡಾನೆ ದಾಳಿಯಿಂದ ಮೃತಪಟ್ಟ ಶೂಟರ್ ಎಚ್.ಎಚ್. ವೆಂಕಟೇಶ್ ಅವರ ಮನೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಭೇಟಿ ನೀಡಿ ಕುಡುಂಬಕ್ಕೆ ಸಾಂತ್ತಾನ ಹೇಳಿದ್ದಾರೆ.

    ಜೊತೆಗೆ ಕುಟುಂಬಕ್ಕೆ ವಿಶೇಷ ಪರಿಹಾರ ಸೇರಿ ಒಟ್ಟು 25 ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.

    ಹೊನ್ನವಳ್ಳಿಯಲ್ಲಿರುವ ವೆಂಕಟೇಶ್ ಅವರ ಮನೆಗೆ ಭೇಟಿ ನೀಡಿದ ಸಚಿವರು, ಮೃತ ವೆಂಕಟೇಶ್ ಅವರ ಪತ್ನಿ ಜಿ.ಎಸ್. ಮಂಜುಳಾ ಮತ್ತು ಪುತ್ರರಾದ ಮೋಹಿತ್ ಮತ್ತು ಮಿಥುನ್ ಮತ್ತು ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.

    ವೆಂಕಟೇಶ್ ಅವರು ತಮ್ಮ ಅದ್ಭುತ ಕಾರ್ಯದಿಂದ ಆನೆ ವೆಂಕಟೇಶ್ ಎಂದೇ ಖ್ಯಾತರಾಗಿದ್ದರು.

    ಶೂಟರ್ ವೆಂಕಟೇಶ್ ಅವರ ನಿಧನದಿಂದ ಅರಣ್ಯ ಇಲಾಖೆಗೆ ತುಂಬಲಾರದ ನಷ್ಟವಾಗಿದೆ. ನಿಮ್ಮ ಈ ನೋವಿನಲ್ಲಿ ನಾವೂ ಭಾಗಿಯಾಗುತ್ತೇವೆ ಎಂದು ಸಾಂತ್ವನ ಹೇಳಿದರು. ಹಿರಿಯ ಅರಣ್ಯಾಧಿಕಾರಿಗಳು ಈ ಸಂದರ್ಭ ಉಪಸ್ಥಿತರಿದ್ದರು. .

    ಆಗಸ್ಟ್ 31ರಂದು ಮಧ್ಯಾಹ್ನ ಘಟನೆಯ ಬಗ್ಗೆ ತಮಗೆ ತಿಳಿದ ಕೂಡಲೇ ಸಂಬಂಧಿತ ಅರಣ್ಯಾಧಿಕಾರಿಗಳೊಂದಿಗೆ ಮಾತನಾಡಿ ಕೂಡಲೇ ವೆಂಕಟೇಶ್ ಅವರನ್ನು ಆಸ್ಪತ್ರೆಗೆ ದಾಖಲಿಸುವಂತೆ ಮತ್ತು ಆಸ್ಪತ್ರೆಯ ವೈದ್ಯರಿಗೆ ಅವರ ಜೀವ ಉಳಿಸಲು ಸಕಲ ಪ್ರಯತ್ನ ಮಾಡುವಂತೆ ಸೂಚಿಸಿದ್ದಾಗಿ ತಿಳಿಸಿದರು.

    ಪ್ರತಿಯೊಬ್ಬರ ಜೀವವೂ ಅಮೂಲ್ಯ, ವನ್ಯಜೀವಿ ಮತ್ತು ಮಾನವ ಸಂಘರ್ಷದಿಂದ ಸಾವು ನೋವು ಸಂಭವಿಸುತ್ತಿರುವುದು ಅತ್ಯಂತ ದುಃಖದ ಸಂಗತಿ ಎಂದರು.

    ವೆಂಕಟೇಶ್ ಅವರು ಆನೆ ಕಾರ್ಯಾಚರಣೆಯಲ್ಲಿ ಪಾಲ್ಗೊಂಡ ವೇಳೆ ನಿರ್ಲಕ್ಷ್ಯ ಆಗಿದೆ ಎಂದು ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಸಚಿವರು,

    ಈ ಬಗ್ಗೆ ಅರಣ್ಯ ಇಲಾಖೆ ಕೂಡ ತನಿಖೆ ನಡೆಸುತ್ತಿದೆ. ನಿರ್ಲಕ್ಷ್ಯ ಸಾಬೀತಾದರೆ ಕ್ರಮ ಜರುಗಿಸಲಾಗುವುದು ಎಂದು ಭರವಸೆ ನೀಡಿದರು.

    Share Information
    Advertisement
    Click to comment

    You must be logged in to post a comment Login

    Leave a Reply