Connect with us

    DAKSHINA KANNADA

    ಭಜನೆಯ ಬಗ್ಗೆ ಅವಹೇಳನಕಾರಿ ಪೋಸ್ಟ್ ಆರೋಪ – ಅಮಾನತು ಆದೇಶದಿಂದ ಸಂಜೀವ ಪೂಜಾರಿ ಮುಕ್ತ – ಕರ್ತವ್ಯಕ್ಕೆ ಹಾಜರು

    ಪುತ್ತೂರು ಎಪ್ರಿಲ್ 08: ಭಜನೆಯ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ್ದಾರೆ ಎನ್ನುವ ಆರೋಪ ಹಾಗು ಕರ್ತವ್ಯದಲ್ಲಿ ಲೋಪ ಆರೋಪದ ಹಿನ್ನಲೆಯಲ್ಲಿ ಮುಖ್ಯ ಅರಣ್ಯಾಧಿಕಾರಿಗಳಿಂದ ಅಮಾನತು ಅದೇಶ ಪಡೆದಿದ್ದ ಕೊಯಿಲಾ ಅರಣ್ಯ ಉಪಸಂರಕ್ಷಣಾಧಿಕಾರಿ ಸಂಜೀವ ಪೂಜಾರಿ ವಿಚಾರಣೆ ಮುಕ್ತಾಯಗೊಂಡಿದೆ.

    ಪ್ರಕರಣದ ವಿಚಾರಣೆ ನಡೆಸಿದ ವಿಚಾರಣಾಧಿಕಾರಿ ಸಂಜೀವ ಪೂಜಾರಿ ವಿರುದ್ಧ ಹೊರಿಸಲಾದ ಆರೋಪಗಳಲ್ಲಿ ಹುರುಳಿಲ್ಲ ಎಂದು ಆದೇಶ ನೀಡಿದ್ದು, ಅಮಾನತು ಆದೇಶದಿಂದ ಸಂಜೀವ ಪೂಜಾರಿ ಮುಕ್ತರಾಗಿದ್ದಾರೆ. ಈ ಹಿನ್ನಲೆಯಲ್ಲಿ ಸಂಜೀವ ಪೂಜಾರಿ ಮತ್ತೆ ಕೊಯಿಲಾ ಅರಣ್ಯ ಉಪಸಂರಕ್ಷಣಾಧಿಕಾರಿ ಕಛೇರಿಯಲ್ಲಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಈ ನಡುವೆ ವಿಚಾರಣೆಯ ಕಾರಣಕ್ಕಾಗಿ ಕಳೆದ ಆಗಸ್ಟ್ ತಿಂಗಳಿನಿಂದ ಸಂಜೀವ ಪೂಜಾರಿಯವರ ಸಂಬಳವನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಿಡುಗಡೆ ಮಾಡದೆ ಬಾಕಿ ಉಳಿಸಿದ್ದು, ತಕ್ಷಣವೇ ಸಂಬಳ ಬಿಡುಗಡೆ ಮಾಡಬೇಕೆಂದು ಸಂಜೀವ ಪೂಜಾರಿ ಆಗ್ರಹಿಸಿದ್ದಾರೆ

    Share Information
    Advertisement
    Click to comment

    You must be logged in to post a comment Login

    Leave a Reply