Connect with us

KARNATAKA

ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾಡಾನೆ ಪ್ರತ್ಯಕ್ಷ

Share Information

ಹಾಸನ, ಆಗಸ್ಟ್ 22: ಗ್ರಾಮದಲ್ಲಿ ಭಯ ಉಂಟು ಮಾಡುತ್ತಿರುವ ಕಾಡಾನೆಗಳು ಈಗ ರಾಷ್ಟ್ರೀಯ ಹೆದ್ದಾರಿಗೂ ಎಂಟ್ರಿ ಕೊಡಲು ಆರಂಭಿಸಿವೆ. ಸಕಲೇಶಪುರ ತಾಲ್ಲೂಕಿನ ಕೊಲ್ಲಹಳ್ಳಿ ಗ್ರಾಮದಲ್ಲಿ ಹೆದ್ದಾರಿಯನ್ನು ಒಂಟಿ ಸಲಗ ದಾಟಿದೆ.

ಬೆಂಗಳೂರು-ಮಂಗಳೂರು ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ‌ 75ರಲ್ಲಿ ಆನೆ ನೋಡಿ ಸವಾರರು ವಾಹನವನ್ನು ನಿಲ್ಲಿಸಿದ್ದಾರೆ. ಎರಡು ಬದಿ ಸಂಚಾರ ಸ್ಥಗಿತಗೊಳಿಸಿ ಕಾಡಾನೆ ದಾಟಲು ಅವಕಾಶ ಮಾಡಿಕೊಟ್ಟಿದ್ದಾರೆ.

ಇನ್ನೊಂದೆಡೆ ಸಕಲೇಶಪುರ ಪಟ್ಟಣದ ಸಮೀಪವೇ ಕಾಡಾನೆ ಬಂದಿದೆ. ಭತ್ತದ ಗದ್ದೆಯಲ್ಲಿ ಓಡಾಡಿ ಬೆಳೆಯನ್ನು ನಾಶ ಮಾಡಿದೆ. ಕಾಡಾನೆ ನೋಡಿ ಗ್ರಾಮಸ್ಥರು ಭಯಗೊಂಡಿದ್ದಾರೆ.


Share Information
Advertisement
Click to comment

You must be logged in to post a comment Login

Leave a Reply