Connect with us

    LATEST NEWS

    ಗುದದ್ವಾರದಲ್ಲಿ ಚಿನ್ನ ಇಟ್ಟು ಅಕ್ರಮ ಸಾಗಾಟಕ್ಕೆ ಯತ್ನ….ಆರೋಪಿ ಸೆರೆ

    ಮಂಗಳೂರು ಜನವರಿ 21: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುದದ್ವಾರದಲ್ಲಿ ಚಿನ್ನವನ್ನು ಅಡಗಿಸಿಟ್ಟು ಅಕ್ರಮವಾಗಿ ಸಾಗಾಟಕ್ಕೆ ಯತ್ನಿಸಿದ್ದ ಆರೋಪಿಯನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತನಿಂದ 44.2 ಲಕ್ಷ ಮೌಲ್ಯದ 870 ಗ್ರಾಂ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ.


    ಬಂಧಿತ ಆರೋಪಿಯನ್ನು ಮಡಿಕೇರಿಯ ಉಬೇದ್ ಬಲ್ಯಾತ್ ಅಜೀಜ್ ಎಂದು ಗುರುತಿಸಲಾಗಿದೆ. ಈತ ದುಬೈನಿಂದ ಮಂಗಳೂರಿಗೆ ಎರ್ ಇಂಡಿಯಾ ವಿಮಾನದಲ್ಲಿ ಆಗಮಿಸಿದ್ದು, ಪ್ರಯಾಣಿಕರ ಪರಿಶೀಲನೆ ವೇಳೆ ಈ ಅಕ್ರಮ ಚಿನ್ನ ಸಾಗಾಟ ಪತ್ತೆಯಾಗಿದೆ. ಆರೋಪಿ 870 ಗ್ರಾಂ ಚಿನ್ನವನ್ನು ತನ್ನ ಗುದದ್ವಾರದಲ್ಲಿ ಪೆಸ್ಟ್ ರೂಪದಲ್ಲಿ ಕರಗಿಸಿ ಅಡಗಿಸಿಟ್ಟುಕೊಂಡು ಸಾಗಾಟಕ್ಕೆ ಯತ್ನಿಸಿದ್ದಾನೆ.

    Share Information
    Advertisement
    Click to comment

    You must be logged in to post a comment Login

    Leave a Reply