Connect with us

DAKSHINA KANNADA

ಪುತ್ತೂರಿನಲ್ಲಿ ಶಿಲಾನ್ಯಾಸ ಮತ್ತು ಬ್ಯಾನರ್ ಪೊಲಿಟಿಕ್ಸ್…ಶಾಸಕ ರೈ ವಿರುದ್ದ ಬಿಜೆಪಿ ಗರಂ..!

ಪುತ್ತೂರು : ಪುತ್ತೂರು ಶಾಸಕ ಅಶೋಕ್‌ಕುಮಾರ್ ರೈ ಇತ್ತೀಚಿನ ದಿನಗಳಲ್ಲಿ ಶಿಲಾನ್ಯಾಸಗಳ ಮೂಲಕವೇ ಸುದ್ಧಿಯಾಗುತ್ತಿದ್ದಾರೆ. ಈ ಹಿಂದೆ ಮಂಜೂರಾದ ಕಾಮಗಾರಿಗಳಿಗೆ ಶಿಲಾನ್ಯಾನ, ಕಾಮಗಾರಿ ಆರಂಭಗೊಂಡು ಮುಗಿಯುವ ಹಂತದಲ್ಲಿದ್ದರೂ, ಆ ಕಾಮಗಾರಿಗೆ ಶಿಲಾನ್ಯಾಸ ಮತ್ತು ಕಾಮಗಾರಿ ಮುಗಿದು ಸಾರ್ವಜನಿಕ ಸೇವೆಗೆ ತೆರೆದುಕೊಂಡ ಕಾಮಗಾರಿಗಳಿಗೂ ಶಾಸಕರು ಶಿಲಾನ್ಯಾಸ ನೆರವೇರಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ ಎಂದು ಪುತ್ತೂರು ಬಿಜೆಪಿ ಆರೋಪಿಸುತ್ತಿದೆ.

ಪುತ್ತೂರಿನಲ್ಲಿ ಈ ಹಿಂದೆ ಶಾಸಕರಾಗಿದ್ದ ಸಂಜೀವ ಮಠಂದೂರು ಸರಕಾರದಿಂದ ತಂದ ಅನುದಾನಗಳಲ್ಲಿ ಕೆಲವು ಕಾಮಗಾರಿಗಳು ನಡೆಯುತ್ತಿದ್ದು, ಉಳಿದ ಕೆಲವು ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿ ಕಾಮಗಾರಿ ಆರಂಭದ ಹಂತದಲ್ಲಿದೆ. ಹೀಗೆ ಶಿಲಾನ್ಯಾಸ ನಡೆದ ಕಾಮಗಾರಿಗಳಿಗೆ ಈಗಿನ ಶಾಸಕ ಅಶೋಕ್ ಕುಮಾರ್ ರೈ ಮರು ಶಿಲಾನ್ಯಾಸ ನಡೆಸುತ್ತಿದ್ದಾರೆ. ಸುಬ್ರಹ್ಮಣ್ಯ-ಪುತ್ತೂರು-ಮಂಜೇಶ್ವರ ರಾಜ್ಯ ಹೆದ್ದಾರಿ, ಪುತ್ತೂರಿನ ಅಂದ್ರಡ್ಕ ಎಂಬಲ್ಲಿ ನಿರ್ಮಾಣ ಹಂತದಲ್ಲಿರುವ ಸೇತುವೆ ಹೀಗೆ ಹಿಂದಿನ ಬಿಜೆಪಿ ಶಾಸಕರು ಶಿಲಾನ್ಯಾಸ ನೆರವೇರಿಸಿದ ಕಾಮಗಾರಿಗಳಿಗೆ ಮತ್ತೆ ಶಿಲಾನ್ಯಾಸಗಳು ನಡೆಯುತ್ತಿವೆ. ತಮ್ಮ ಪಕ್ಷದ ನಾಯಕರು ಮತ್ತು ಕಾರ್ಯಕರ್ತರನ್ನು ಸೇರಿಸಿ ಸರಕಾರಿ ಶಿಷ್ಟಾಚಾರಗಳನ್ನು ಬದಿಗೊತ್ತಿ ಶಿಲಾನ್ಯಾಸ ಕಾರ್ಯಕ್ರಮಗಳು ನಡೆಯುತ್ತಿದ್ದು, ಇದಕ್ಕೆ ಬಿಜೆಪಿ ಆಕ್ಷೇಪ ವ್ಯಕ್ತಪಡಿಸುತ್ತಿದೆ. ಬಿಜೆಪಿ ಶಾಸಕರಿದ್ದ ಸಂದರ್ಭದಲ್ಲಿ ತಂದ ಅನುದಾನಗಳನ್ನು ಮತ್ತು ಯೋಜನೆಗಳನ್ನು ತಮ್ಮದೆಂದು ಬಿಂಬಿಸುತ್ತಿರುವ ಶಾಸಕ ಅಶೋಕ್ ಕುಮಾರ್ ರೈ ಜನರಿಗೆ ತಪ್ಪು ಸಂದೇಶ ನೀಡುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.‌ ತನ್ನ ಶಾಸಕ ನೆಲೆಯಲ್ಲಿ ಸರಕಾರದಿಂದ ಯಾವುದೇ ಅನುದಾನ ತರಲು ಸಾಧ್ಯವಾಗದ ಶಾಸಕರು ಬಿಜೆಪಿ ಶಾಸಕರ ಅವಧಿಯ ಕಾಮಗಾರಿಗಳನ್ನು ತಮ್ಮದೆಂದು ಬಿಂಬಿಸುವ ನಾಟಕವಾಡುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಮುಂದಿನ ದಿನಗಳಲ್ಲಿ ಈ ರೀತಿಯ ಕಾರ್ಯಕ್ರಮಗಳನ್ನು ಆಯೋಜಿಸಿದಲ್ಲಿ ಉಗ್ರ ಪ್ರತಿಭಟನೆಯ ಎಚ್ಚರಿಕೆಯನ್ನೂ ಬಿಜೆಪಿ ನಾಯಕರು ನೀಡಿದ್ದಾರೆ.

 

 

 

 

Share Information
Continue Reading
Advertisement
Click to comment

Leave a Reply

Your email address will not be published. Required fields are marked *