Connect with us

LATEST NEWS

ಉಳ್ಳಾಲ – ಕಂಪೌಂಡ್ ಕುಸಿದು ಇಬ್ಬರು ಮಕ್ಕಳು ಸಹಿತ ನಾಲ್ವರ ದುರ್ಮರಣ

ಮಂಗಳೂರು ಜೂನ್ 26: ಕರಾವಳಿಯಲ್ಲಿ ಮಳೆ ಅಬ್ಬರ ಜೋರಾಗಿದ್ದು ಮಳೆ ಅಬ್ಬರಕ್ಕೆ ಕಂಪೌಂಡ್ ಒಂದು ಮನೆಯ ಮೇಲೆ ಕುಸಿದು ಬಿದ್ದ ಕಾರಣ ಇಬ್ಬರು ಮಕ್ಕಳು ಸಹಿತ ದಂಪತಿ ಸಾವನಪ್ಪಿದ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಮುನ್ನೂರು ಗ್ರಾಮದ ಕುತ್ತಾರು ಮದನಿ ನಗರ ಎಂಬಲ್ಲಿ ನಡೆದಿದೆ.


ಮೃತರನ್ನು ಯಾಸಿರ್(45),ಅವರ ಪತ್ನಿ ಮರಿಯಮ್ಮ(40) ಮಕ್ಕಳಾದ ರಿಯಾನ ಮತ್ತು ರಿಫಾನ ಎಂದು ಗುರುತಿಸಲಾಗಿದೆ. ಅಬೂಬಕ್ಕರ್ ಎಂಬವರ ಮನೆಯ ಆವರಣ ಗೋಡೆ ಕುಸಿದು ಯಾಸಿರ್ ಅವರ ಮನೆಯ ಗೋಡೆ ಮೇಲೆ ಬಿದ್ದು ದುರಂತ ಸಂಭವಿಸಿದೆ.

ಯಾಸೀರ್ ಮಂಗಳೂರಿನ ಬಂದರಿನಲ್ಲಿ ಮಡ್ಡಿ ಆಯಿಲ್ ಕಾರ್ಯನಿರ್ವಹಿಸುತ್ತಿದ್ದರು. ರಾತ್ರಿ ಊಟ ಮುಗಿಸಿ ಮನೆಯ ಕೋಣೆಯಲ್ಲಿ ಮಲಗಿದ್ದ ಇಬ್ಬರು ಪುತ್ರಿಯರು ಹಾಗೂ ದಂಪತಿ ಬೆಳಗ್ಗಿನ ಜಾವ ಬೆಳಗ್ಗಿನ ಜಾವ ಇಲ್ಲವಾಗಿದ್ದಾರೆ. ರಾತ್ರಿಯಿಡೀ ಮಳೆಯಾದ ಪರಿಣಾಮ ಕಂಪೌಂಡ್ ವಾಲ್ ಹಾಗೂ ಎರಡು ಅಡಿಕೆ ಮರಗಳು ಯಾಸಿರ್ ಅವರ ಮನೆ ಮೇಲೆ ಉರುಳಿಬಿದ್ದಿದೆ. ರಿಹಾನಾ ಹಾಗೂ ರಿಫಾನ ನಗರದ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಶಾಲೆ ಹಾಗೂ ಕಾಲೇಜಿಗೆ ತೆರಳುತ್ತಿದ್ದರು. ಆರು ವರ್ಷಗಳ ಹಿಂದೆ ಮನೆ ಖರೀದಿಸಿದ್ದ ಇವರು ಒಂದು ವರ್ಷ ಮನೆಯನ್ನು ಲೀಸ್ ಗೆ ನೀಡಿ ಆರು ತಿಂಗಳ ಹಿಂದಷ್ಟೇ ಮನೆಗೆ ವಾಪಸ್ಸಾಗಿದ್ದರು. ಎರಡು ವರ್ಷಗಳ ಹಿಂದೆಯೂ ಮನೆ ಮೇಲೆ ಇದೇ ರೀತಿ ಕಂಪೌಂಡ್ ಕುಸಿದಿದ್ದು, ಯಾವುದೇ ಪ್ರಾಣಾಪಾಯವಾಗಿರಲಿಲ್ಲ.

ಮೂರು ಗಂಟೆಗಳ ಕಾರ್ಯಾಚರಣೆ ಬಳಿಕ ನಾಲ್ಕು ಮೃತದೇಹಗಳನ್ನು ಹೊರತೆಗೆಯಲಾಗಿದೆ. ಸ್ಥಳೀಯರು ಮೂರು ಮೃತದೇಹಗಳನ್ನು ಅವಶೇಷಗಳಡಿಯಿಂದ ಹೊರತೆಗೆದರೆ , ಅಗ್ನಿಶಾಮಕ ದಳ ಸ್ಥಳೀಯರ ಜೊತೆ ಎರಡು ಗಂಟೆ ಕಾರ್ಯಾಚರಣೆ ನಡೆಸಿ ಕೊನೆಯ ಮೃತದೇಹವನ್ನು ಹೊರತೆಗೆದಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *