Connect with us

    LATEST NEWS

    ವಿಶೇಷ ಪೊಲೀಸ್ ಕಾರ್ಯಾಚರಣೆ : ಎನ್‌ಕೌಂಟರ್‌ ನಲ್ಲಿ ನಾಲ್ವರು ನಕ್ಸಲರ ಹತ್ಯೆ..!

    ​ಗಡ್ಚಿರೋಲಿ:  ವಿಶೇಷ ಪೊಲೀಸರ ಪಡೆ ಹಾಗೂ ನಕ್ಸಲರ ನಡುವೆ ಮಂಗಳವಾರ ಮುಂಜಾನೆ ನಡೆದ ಮುಖಾಮುಖಿ ಗುಂಡಿನ ಚಕಮಕಿಯಲ್ಲಿ  ನಾಲ್ವರು ನಕ್ಸಲರು  ಹತರಾಗಿದ್ದಾರೆ ಎಂದು ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

    ಮುಂಬರುವ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ವಿಧ್ವಂಸಕ ಕೃತ್ಯ ನಡೆಸುವ ಉದ್ದೇಶದಿಂದ ಕೆಲ ನಕ್ಸಲರು ನೆರೆಯ ತೆಲಂಗಾಣದಿಂದ ಪ್ರಾಣಹಿತ ನದಿ ದಾಟಿ ಮಹಾರಾಷ್ಟ್ರದ ಗಡ್ಚಿರೋಲಿಗೆ ಪ್ರವೇಶಿಸಿದ್ದಾರೆ ಎಂಬ ಮಾಹಿತಿ ಸೋಮವಾರ ಮಧ್ಯಾಹ್ನ ಪೊಲೀಸರಿಗೆ ಲಭಿಸಿತ್ತು.ಹೀಗಾಗಿ ಮಹಾರಾಷ್ಟ್ರ ಪೊಲೀಸರ ವಿಶೇಷ ಸಿ-60 ಕಮಾಂಡೋಗಳು ಮತ್ತು ಸಿಆರ್‌ಪಿಎಫ್ ಕಮಾಂಡೋಗಳು ಅರಣ್ಯ ಪ್ರದೇಶದಲ್ಲಿ ಕಾರ್ಯಾಚರಣೆ ಆರಂಭಿಸಿದ್ದರು. ಸಿ-60 ಘಟಕದ ತಂಡ ಮಂಗಳವಾರ ಬೆಳಿಗ್ಗೆ ಕೋಲಮಾರ್ಕ ಪರ್ವತಗಳಲ್ಲಿ ಶೋಧ ನಡೆಸುತ್ತಿದ್ದಾಗ ನಕ್ಸಲರು ಮನಬಂದಂತೆ ಗುಂಡಿನ ದಾಳಿ ನಡೆಸಿದ್ದು, ಭದ್ರತಾ ಸಿಬ್ಬಂದಿ ಪ್ರತಿದಾಳಿ ನಡೆಸಿದ್ದಾರೆ. ಘಟನೆಯಲ್ಲಿ ನಾಲ್ವರು ನಕ್ಸಲರನ್ನು ಹತ್ಯೆಗೈಯಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
    ಮೃತ ನಕ್ಸಲರನ್ನು ವಿವಿಧ ನಕ್ಸಲ್ ಸಮಿತಿಗಳ ಕಾರ್ಯದರ್ಶಿಗಳಾದ ವರ್ಗೀಶ್, ಮಾಗ್ತು ಮತ್ತು ಪ್ಲಾಟೂನ್ ಸದಸ್ಯರಾದ ಕುರ್ಸಂಗ್ ರಾಜು ಮತ್ತು ಕುಡಿಮೆಟ್ಟ ವೆಂಕಟೇಶ್ ಎಂದು ಗುರುತಿಸಲಾಗಿದೆ. ಇವರನ್ನು ಹಿಡಿದುಕೊಟ್ಟವರಿಗೆ ₹36 ಲಕ್ಷ ಬಹುಮಾನ ಘೋಷಿಸಲಾಗಿತ್ತು.ನಕ್ಸಲರಿಂದ ಎಕೆ 47 ರೈಫಲ್, ಎರಡು ದೇಶ ನಿರ್ಮಿತ ಪಿಸ್ತೂಲ್ ಸೇರಿದಂತೆ ಹಲವು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply