Connect with us

    LATEST NEWS

    ಮಂಗಳೂರಿನ ಅಡಿಕೆ ವ್ಯಾಪಾರಿಗಳಿಗೆ ಕೊಟ್ಯಾಂತರ ರೂಪಾಯಿ ವಂಚನೆ – ಸೆನ್ ಠಾಣೆಯ ದೂರು ದಾಖಲು

    ಮಂಗಳೂರು ಜುಲೈ 23 : ಉತ್ತರಭಾರತದ ಅನೇಕ ಅಡಿಕೆ ವ್ಯಾಪಾರದ ಕಂಪೆನಿಗಳು ಮಂಗಳೂರಿನ ಕೆಲವು ಅಡಿಕೆ ವ್ಯಾಪಾರಿಗಳಿಗೆ ಕೋಟ್ಯಾಂತರ ಹಣ ವಂಚನೆ ಮಾಡಿರುವ ಬಗ್ಗೆ ಮಂಗಳೂರಿನ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


    ಪರ್ಲೀನ್ ಟ್ರೇಂಡಿಂಗ್ ಕಂಪೆನಿ, ವಿಮಲ್ ಬ್ರದರ್ಸ್ ಹಾಗೂ ಕಮಲೇಶ್ ಪಡಾಲಿಯಾ ಎಂಬ ಕಂಪೆನಿಗಳ ವಿರುದ್ದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪರ್ಲೀನ್‌ ಟ್ರೇಡಿಂಗ್ ಕಂಪನಿಯು ಇಲ್ಲಿನ ವರ್ತಕರಿಗೆ ಒಟ್ಟು ₹ 1.34 ಕೋಟಿ ಹಾಗೂವಿಮಲ್‌ ಬ್ರದರ್ಸ್‌ ಕಂಪನಿಯು ಒಟ್ಟು ₹ 1.21 ಲಕ್ಷ ವಂಚನೆ ನಡೆಸಿದ ಬಗ್ಗೆ ದೂರು ದಾಖಲಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

    ಮತ್ತೊಂದು ವಿಮಲ್‌ ಬ್ರದರ್ಸ್‌ ಕಂಪನಿಯ ಮಾಲೀಕರಾದ ಕಮಲೇಶ್‌ ಪಡಾಲಿಯಾ ಮತ್ತು ಆತನ ಪತ್ನಿ ರೋಹಿಣಿ ಸೇರಿ ₹ 59.62 ಲಕ್ಷ ವಂಚಿಸಿದ್ದಾರೆ. ಆರೋಪಿಗಳು ತಮ್ಮ ಕಂಪನಿಯನ್ನು ಮುಚ್ಚಿ ಅದರಲ್ಲಿದ್ದ 115 ಚೀಲ ಅಡಿಕೆಯನ್ನು ಸಂಬಂಧಿಕರ ಗೋದಾಮಿಗೆ ಸ್ಥಳಾಂತರಿಸಿದ್ದಾರೆ. ಈ ಕರೆ ಮಾಡಿದರೆ ಫೋನ್ ಸ್ವಿಚ‌ಡ್‌ ಆಫ್ ಎಂದು ಪ್ರತಿಕ್ರಿಯೆ ಬರುತ್ತಿದೆ’ ಎಂದು ಹಬೀಬ್‌ ರಹಿಮಾನ್ ಕೆ. ಅವರು ದೂರು ನೀಡಿದ್ದಾರೆ.
    ವಿಮಲ್ ಬ್ರದರ್ಸ್‌ ಕಂಪನಿಯು ಒಟ್ಟು ₹ 25.25 ಲಕ್ಷ ವಂಚಿಸಿದೆ ಎಂದು ಎಸ್‌.ಆರ್‌.ಟ್ರೇಡಿಂಗ್‌ ಕಂಪನಿಯ ಪಾಲುದಾರ ಶ್ರೀಪತಿ ಮತ್ತು ಕೆ.ಎಸ್‌.ನಾರಾಯಣ ಭಟ್‌, ₹ 36.39 ಲಕ್ಷ ವಂಚಿಸಿದೆ ಎಂದು ಎ.ಎ.ಸುಪಾರಿ ಟ್ರೇಡಿಂಗ್ ಕಂಪನಿಯ ಅಬ್ದುಲ್ ರಹಿಮಾನ್‌ ದೂರು ನೀಡಿದ್ದಾರೆ’ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಅಡಿಕೆ ಖರೀಸಿದ್ದ ಗುಜರಾತಿನ ವರ್ತಕ ಕಮಲೇಶ್ ಪಡಾಲಿಯಾ ₹8.99 ಲಕ್ಷ ಹಣವನ್ನು ನೀಡದೇ ವಂಚಿಸಿದ ಬಗ್ಗೆ ಬೀಬಿ ಅಲಾಬಿ ರಸ್ತೆಯ ಒಣ ಅಡಿಕೆ ವ್ಯಾಪಾರಿ ಯೂಸುಫ್ ವಾರದ ಹಿಂದೆ ದೂರುನೀಡಿದ್ದರು.

    Share Information
    Advertisement
    Click to comment

    You must be logged in to post a comment Login

    Leave a Reply