Connect with us

BELTHANGADI

ಸರ್ಕಾರಿ ಬಸ್ ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಹರಿದುಬಂದ ಮಹಿಳಾ ಭಕ್ತರ ದಂಡು

ಧರ್ಮಸ್ಥಳ, ಜೂನ್ 18: ಸರ್ಕಾರಿ ಬಸ್ ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಹಿನ್ನೆಲೆ, ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಇಂದು ಸಹ ಮಹಿಳಾ ಭಕ್ತರ ದಂಡು ಹರಿದುಬಂದಿದೆ.

ಬೆಂಗಳೂರು, ಮಂಡ್ಯ, ಹಾಸನ, ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ಉತ್ತರ ಕರ್ನಾಟಕ ಭಾಗದಿಂದ ಮಹಿಳಾ ಭಕ್ತರು ಆಗಮಿಸಿದ್ದಾರೆ. ಬೆಳ್ಳಂ ಬೆಳಗ್ಗೆ ಸರತಿಸಾಲಿನಲ್ಲಿ ನಿಂತು ಜನ ಮಂಜುನಾಥನ ದರ್ಶನ ಪಡೆಯುತ್ತಿದ್ದಾರೆ.

ಕ್ಷೇತ್ರಕ್ಕೆ ಆಗಮಿಸುತ್ತಿರುವ ಮಹಿಳೆಯರಲ್ಲಿ ಮೊದಲ ಬಾರಿಗೆ ಆಗಮಿಸಿದವರೆ ಹೆಚ್ಚಾಗಿದ್ದು, ಶಕ್ತಿ ಯೋಜನೆಯ ಬಗ್ಗೆ ಮಹಿಳೆಯರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಯೋಜನೆ ಜಾರಿಯಾದ ಬಳಿಕ ಕ್ಷೇತ್ರಕ್ಕೆ ಆಗಮಿಸುವ ಮಹಿಳಾ ಭಕ್ತರ ಸಂಖ್ಯೆಯಲ್ಲಿ ಭಾರಿ ಹೆಚ್ಚಳವಾಗಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *