Connect with us

    LATEST NEWS

    ಅಯೋಧ್ಯೆ ತೀರ್ಪು ಹಿನ್ನಲೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಖಾಕಿ ಸರ್ಪಗಾವಲು

    ಅಯೋಧ್ಯೆ ತೀರ್ಪು ಹಿನ್ನಲೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಖಾಕಿ ಸರ್ಪಗಾವಲು

    ಮಂಗಳೂರು ನವೆಂಬರ್ 8 : ನಾಳೆ ಆಯೋಧ್ಯಾ ರಾಮಜನ್ಮಭೂಮಿ ತೀರ್ಪು ಪ್ರಕಟ ಹಿನ್ನಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಗಿ ಖಾಕಿ ಬಂದೋಬಸ್ತ್ ಏರ್ಪಡಿಸಲಾಗಿದೆ.

    ಕೋಮು ಸೂಕ್ಷ್ಮ ಪ್ರದೇಶವಾಗಿರುವ ಕಾರಣ ಇಡೀ ಜಿಲ್ಲೆಯಲ್ಲಿ ಸುಮಾರು 1700 ಮಂದಿ ಪೊಲೀಸ್ ರಿಂದ ಭಧ್ರತೆ ಒದಗಿಸಲಾಗಿದ್ದುಪ, ಪೊಲೀಸರೊಂದಿಗೆ 15 PI, 1 RAF , 5 KSRP ತುಕುಡಿಗಳನ್ನು ಭದ್ರತೆ ಬಳಸಲಾಗಿದೆ. ಜಿಲ್ಲೆಯ ಆಯಕಟ್ಟಿನ ಪ್ರದೇಶದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು. ರಾತ್ರಿಯಿಂದಲೇ ಪೊಲೀಸರಿಗೆ ಕರ್ತವ್ಯಕ್ಕೆ ಹಾಜರಾಗಲು ಸೂಚನೆಯನ್ನು ಕೂಡ ನೀಡಲಾಗಿದೆ.

    ನಾಳೆ ಬೆಳಿಗ್ಗೆ 6 ಗಂಟೆಯಿಂದ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಎಲ್ಲಾ ರೀತಿಯ ಮದ್ಯದಂಗಡಿಗಳನ್ನು, ವೈನ್ ಶಾಪ್,ಬಾರ್ ರಸ್ಟೋರೆಂಟ್ ಗಳನ್ನು 24 ಗಂಟೆಗಳ ಕಾಲ ಬಂದ್ ಮಾಡಲು ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಆದೇಶಿಸಿದ್ದಾರೆ. ಈ ಆದೇಶವನ್ನು ಕಟ್ಟು ನಿಟ್ಟಾಗಿ ಜಾರಿಗೆ ತರಲು ಅಬಕಾರಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply