Connect with us

    LATEST NEWS

    ಕಲ್ಲಡ್ಕದಲ್ಲಿ ಫುಲ್‌ ಟ್ರಾಫಿಕ್‌ ಜಾಂ- ಕಿ.ಮೀ ಗಟ್ಟಲೇ ವಾಹನಗಳ ಸಾಲು, ಅಂಬುಲೆನ್ಸ್‌ಗಳ ಪರದಾಟ

    ಬಂಟ್ವಾಳ, ಜುಲೈ 08: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕದಲ್ಲಿ ಇಂದು ಬೆಳಿಗ್ಗೆಯಿಂದ ಸಂಚಾರಕ್ಕೆ ತಡೆ ಉಂಟಾಗಿದೆ.

    ಬೆಳಿಗ್ಗೆ ಸುಮಾರು ‌8 ಗಂಟೆಯ ವೇಳೆ ಆರಂಭವಾದ ಸಂಚಾರಕ್ಕೆ ಅಡಚಣೆ 10.30 ಗಂಟೆ ವರೆಗೂ ಮುಗಿದಿಲ್ಲ. ಕಲ್ಲಡ್ಕ ಅಮ್ಟೂರು ಕ್ರಾಸ್ ನ ಬಳಿ ಹೆದ್ದಾರಿಯಲ್ಲಿ ಬೃಹತ್ ಹೊಂಡ ವೊಂದು ನಿರ್ಮಾಣವಾದ ಹಿನ್ನೆಲೆಯಲ್ಲಿ ಪ್ರಾರಂಭವಾದ ಬ್ಲಾಕ್ ನಿರಂತರವಾಗಿ ಮುಂದುವರಿದಿದೆ.

    ಬೆಳಿಗ್ಗೆ ಹೊತ್ತು ಕೆಲಸಕ್ಕೆ ಹೋಗುವವರ ಜೊತೆ ಅಂಬ್ಯುಲೆನ್ಸ್ ವಾಹನಗಳು ಕೂಡ ತಾಸು ಗಟ್ಟಲೆ ಕ್ಯೂ ನಲ್ಲಿ ನಿಂತು ಪರದಾಡಬೇಕಾಯಿತು. ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಯ ಗುತ್ತಿಗೆ ವಹಿಸಿಕೊಂಡ ಕೆ.ಎನ್.ಆರ್.ಸಿ.ಕಂಪೆನಿ ಗುಂಡಿ ಮುಚ್ಚುವ ಕಾರ್ಯ ಮಾಡಿದೆ.

    ಆದರೆ ಕಾಮಗಾರಿ ಆರಂಭವಾದ ಬಳಿಕ ನಿರಂತರವಾಗಿ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿದೆಯಾದರೂ ಈ ರೀತಿಯಲ್ಲಿ ತಾಸುಗಟ್ಟಲೆಗಳ ಕಾಲ ರಾಷ್ಟ್ರೀಯ ಹೆದ್ದಾರಿ ತಡೆಯಾಗುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ.

    5 ನಿಮಿಷಗಳ ಕಾಲ ಹೆದ್ದಾರಿ ಬಂದ್ ಆದರೆ ಕಾನೂನು ಕ್ರಮ ಕೈಗೊಳ್ಳುವ ಪೊಲೀಸರು ಗುತ್ತಿಗೆ ವಹಿಸಿಕೊಂಡ ಕಂಪೆನಿಯ ಅವ್ಯವಸ್ಥಿತ ಕಾಮಗಾರಿಯಿಂದ ಈ ತೊಂದರೆ ಆದರೂ ಅವರ ಬಗ್ಗೆ ಯಾಕೆ ಮೃದು ಧೋರಣೆ ಹೊಂದಿದೆ ಎಂದು ಸಾರ್ವಜನಿಕರು ಪ್ರಶ್ನೆ ಮಾಡುತ್ತಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply