UDUPI
ಶಾರ್ಟ್ ಸರ್ಕ್ಯೂಟ್ ನಿಂದ ಎರಡು ಅಂಗಡಿ ಸಂಪೂರ್ಣ ಬಸ್ಮ
ಕುಂದಾಪುರ ಜುಲೈ 7: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿ ಎರಡು ಅಂಗಡಿಗಳು ಸಂಪೂರ್ಣ ಸುಟ್ಟುಹೋದ ಘಟನೆ ಗಂಗೊಳ್ಳಿ ಪೇಟೆಯಲ್ಲಿ ನಡೆದಿದೆ. ಇಂದು ಬೆಳಗ್ಗಿನ ಜಾವ 3 ಸುಮಾರಿಗೆ ಈ ಘಟನೆ ನಡೆದಿದೆ.
ಪೇಟೆಯ ನೀರಿನ ಟ್ಯಾಂಕ್ ಬಳಿಯಿರುವ ಜಿ. ದಿನೇಶ್ ನಾಯಕ್ ಹಾಗೂ ಜಿ. ಪದ್ಮನಾಭ್ ನಾಯಕ್ ಅವರ ಅಂಗಡಿಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು, ಎರಡೂ ಅಂಗಡಿಗಳು ಸಂಪೂರ್ಣ ಸುಟ್ಟು ಹೋಗಿದೆ. 20 ಲಕ್ಷಕ್ಕೂ ಹೆಚ್ಚು ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.
.
You must be logged in to post a comment Login