Connect with us

KARNATAKA

ಬೆಂಗಳೂರಲ್ಲಿ ಗ್ಯಾಂಗ್‌ರೇಪ್ : ಕೆಲಸದ ಕೊಡಿಸೋ ನೆಪದಲ್ಲಿ ವೇಶ್ಯಾವಾಟಿಕೆಗೆ ನೂಕಿದ ಪ್ರೇಮಿ

ಬೆಂಗಳೂರು, ಆಗಸ್ಟ್ : ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಗ್ಯಾಂಗ್ ರೇಪ್ ಪ್ರಕರಣ ದಾಖಲಾಗಿದ್ದು, ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ ಸಂದರ್ಭ ಪ್ರಕರಣ ಬೆಳಕಿಗೆ ಬಂದಿರುವುದಾಗಿ ಪೊಲೀಸರು ಮಾಹಿತಿ ತಿಳಿಸಿದ್ದಾರೆ.

ಕಳೆದ 3 ವರ್ಷಗಳ ಹಿಂದೆ ಮಂಡ್ಯ ಮೂಲದ ಯುವತಿಯನ್ನು ಪ್ರಿಯಕರನೇ ಬೆಂಗಳೂರಿಗೆ ಕರೆತಂದು ವೇಶ್ಯಾವಾಟಿಕೆ ಜಾಲಕ್ಕೆ ನೂಕಿದ್ದಾನೆ. ಕೆಲಸ ಕೊಡಿಸುವುದಾಗಿ ನಂಬಿಸಿ, ಮಂಜುಳಾ ಎಂಬ ಮಹಿಳೆಯ ಸಂಪರ್ಕಕ್ಕೆ ಪ್ರಿಯಕರ ಬಿಟ್ಟಿದ್ದ. ಈ ವೇಳೆ ಮಂಜುಳಾ, ಯುವತಿಯನ್ನು ವೇಶ್ಯಾವಾಟಿಕೆ ಜಾಲಕ್ಕೆ ತಳ್ಳಿದ್ದಾಳೆ. ಮಾತ್ರವಲ್ಲದೇ ಆಕೆಯ ಮೇಲೆ ಹಲವರು ಏಕಕಾಲಕ್ಕೆ ದೌರ್ಜನ್ಯ ಎಸಗಿರುವುದಾಗಿ ಸಂತ್ರಸ್ತ ಯುವತಿ ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ.

ವೇಶ್ಯಾವಾಟಿಕೆಗೆ ಶಿವಾನಂದ ಸರ್ಕಲ್ ಬಳಿ ಇರುವ ಸಾಯಿ ಲಾಡ್ಜ್ ಮಾಲೀಕ ಸಂತೋಷ್ ಕೂಡಾ ಬೆಂಬಲ ನೀಡುತ್ತಿದ್ದು, ಆತ ದಂಧೆಗೆ ಗ್ರಾಹಕರನ್ನು ಹೋಟೆಲ್‌ಗೆ ಕಳುಹಿಸುತ್ತಿದ್ದ ಎನ್ನಲಾಗಿದೆ. ಈ ಬಗ್ಗೆ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಂಬಂಧ ಮಂಜುಳಾ, ಬ್ರಹ್ಮೇಂದ್ರ ಹಾಗೂ ಲಾಡ್ಜ್ ಮಾಲೀಕ ಸಂತೋಷ್‌ನನ್ನು ಪೊಲೀಸರು ಬಂಧಿಸಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *