Connect with us

LATEST NEWS

ಮಂಗಳೂರಿನಲ್ಲಿ ಮತ್ತೆ ಗ್ಯಾಂಗ್ ವಾರ್

ಮಂಗಳೂರಿನಲ್ಲಿ ಮತ್ತೆ ಗ್ಯಾಂಗ್ ವಾರ್

ಮಂಗಳೂರು ಅಕ್ಟೋಬರ್ 4: ಮಂಗಳೂರಿನಲ್ಲಿ ಮತ್ತೆ ನೆತ್ತರು ಹರಿದಿದೆ. ಗ್ಯಾಂಗ್ ವಾರ್ ನಲ್ಲಿ ಯುವಕ ಬಲಿಯಾದ ಘಟನೆ ನಡೆದಿದೆ. ಮಂಗಳೂರು ಹೊರವಲಯದ ಉಳ್ಳಾಲದಲ್ಲಿ ಗ್ಯಾಂಗ್ ವಾರ್ ನಡೆದಿದ್ದು ದುಷ್ಕರ್ಮಿಗಳ ತಂಡ ಇಬ್ಬರು ಯುವಕರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿದೆ.

ಘಟನೆಯಲ್ಲಿ ಒರ್ವ ಸಾವನ್ನಪ್ಪಿದ್ದು ಇನ್ನೊರ್ವನ ಸ್ಥಿತಿ ಗಂಭೀರವಾಗಿದೆ. ಗ್ಯಾಂಗ್ ವಾರ್ ನಲ್ಲಿ ಮೃತಪಟ್ಟ ಯುವಕನನ್ನು ಝುಭೇರ್(38) ಎಂದು ಗುರುತಿಸಲಾಗಿದೆ . ಘಟನೆಯಲ್ಲಿ ಇಲ್ಯಾಸ್ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳ್ಳಾಲ ಮುಕ್ಕಚ್ಚೇರಿಯಲ್ಲಿ ಈ ಘಟನೆ ನಡೆದಿದೆ. ಉಳ್ಳಾಲ ಠಾಣಾಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

 

Share Information
Continue Reading
Advertisement
Click to comment

Leave a Reply

Your email address will not be published. Required fields are marked *